ನಗರ ಪಂಚಾಯತ್ ಚುನಾವಣೆ : 6 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಕಗ್ಗಂಟು

May 13, 2019
3:37 PM

ಸುಳ್ಯ:  ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಂಡಿದೆ.  ಬಿಡುಗಡೆಯಾದ 14 ಮಂದಿಯೂ ಹೊಸ ಮುಖಗಳಾಗಿದ್ದು ಹೊಸ ಪ್ರಯೋಗಕ್ಕೆ ಬಿಜೆಪಿ ಮುಂದಾಗಿದೆ. ಆರು ವಾರ್ಡ್ ಗಳ ಅಭ್ಯರ್ಥಿ ಆಯ್ಕೆ ಬಾಕಿ ಉಳಿದಿದೆ.

Advertisement
Advertisement

ಈ ವಾರ್ಡ್ ಗಳಲ್ಲಿ ಅಭ್ಯರ್ಥಿ ಆಕಾಂಕ್ಷಿಗಳು ಹೆಚ್ಚು ಇರುವ ಕಾರಣ ಘೋಷಣೆಗೆ ಬಾಕಿ ಉಳಿದಿದೆ‌ ಎನ್ನನಲಾಗುತ್ತಿದೆ. ನಗರ ಪಂಚಾಯತ್ ನಲ್ಲಿ ಸದಸ್ಯರಾಗಿದ್ದ ಇಬ್ಬರು ಹಿರಿಯರು ಮತ್ತೆ ಸ್ಪರ್ಧಿಸಲು ಆಸಕ್ತಿ ಹೊಂದಿದ್ದು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಇದು ಕೂಡ ಕೆಲವು ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆಗೆ ತೊಡಕಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಎಲ್ಲಾ ವಾರ್ಡ್ ಗಳಲ್ಲಿಯೂ ಹೊಸಬರನ್ನು ಕಣಕ್ಕಿಳಿಸುವುದು ಬಿಜೆಪಿಯ ಚುನಾವಣಾ ತಂತ್ರ. ಆದುದರಿಂದ ಸ್ಪರ್ಧಿಸಲು ಉತ್ಸುಕರಾಗಿರುವ ಮಾಜಿ ಸದಸ್ಯರುಗಳನ್ನು , ಮಾಜಿ ಅಧ್ಯಕ್ಷರನ್ನು  ಓಲೈಕೆ ಮಾಡಿ ಸ್ಪರ್ಧಾ ಕಣದಿಂದ ಹಿಂದೆ ಸರಿಸುವ ಪ್ರಯತ್ನ ನಡೆಯುತ್ತಿದೆ  ಎಂದು ತಿಳಿದು ಬಂದಿದೆ. ಈಗ ಬಿಜೆಪಿ ಯು ಒತ್ತಡಕ್ಕೆ ಮಣಿಯುತ್ತಾ , ಇಲ್ಲವೋ ಎನ್ನುವುದು ಕುತೂಹಲ ಮೂಡಿಸಿದೆ.

ಎಂಟು ಮಂದಿ ಆಕಾಂಕ್ಷಿಗಳಿರುವ ಸಾಮಾನ್ಯ ಮಹಿಳಾ ವಾರ್ಡ್ ನಲ್ಲಿಯೂ ಅಭ್ಯರ್ಥಿ ಘೋಷಣೆ ಆಗಿಲ್ಲ. ಒಂದೆರಡು ಸುತ್ತಿನ ಮಾತುಕತೆ ನಡೆಸಿ ಮಂಗಳವಾರ ಸಂಜೆಯ ವೇಳೆಗೆ ಉಳಿದ ಅಭ್ಯರ್ಥಿಗಳ ಆಯ್ಕೆಯನ್ನೂ ಅಂತಿಮಗೊಳಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.

ವಾರ್ಡ್ ಸಂಖ್ಯೆ 2(ಕೊಯಿಕುಳಿ), 3(ಜಯನಗರ), 8(ಕುರುಂಜಿಭಾಗ), 9(ಭಸ್ಮಡ್ಕ), 10(ಕೇರ್ಪಳ),20(ಕಾನತ್ತಿಲ-ಜಟ್ಟಿಪಳ್ಳ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆಗೆ ಬಾಕಿ ಉಳಿದಿದೆ.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ
May 21, 2025
7:09 AM
by: ದ ರೂರಲ್ ಮಿರರ್.ಕಾಂ
ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?
May 20, 2025
9:44 PM
by: The Rural Mirror ಸುದ್ದಿಜಾಲ
ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ
May 20, 2025
7:53 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror