ನಗರ ಪಂಚಾಯತ್ ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಕ್ರಮ

June 6, 2019
10:15 PM

ಸುಳ್ಯ: ಸುಳ್ಯ ನಗರ ಪಂಚಾಯತ್  ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಕ್ರಮ ಕೈಗೊಳ್ಳಲು ನಗರ ಪಂಚಾಯತ್ ನಿರ್ಧರಿಸಿದೆ.

ನಗರದಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಗೊಬ್ಬರ ತಯಾರಿಗೆ ಕಳುಹಿಸಲಾಗುತ್ತದೆ. ಆದರೆ ಒಣ ಕಸವನ್ನು ನಗರ ಪಂಚಾಯತ್ ಕಚೇರಿ ಬಳಿಯ ಕಟ್ಟಡದಲ್ಲಿ ತುಂಬಿಡುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೇ ಸ್ಥಳಕ್ಕೆ ಆಗಮಿಸಿ ಕಸವನ್ನು ತೆರವು ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಒಣ ಕಸವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಸುಮಾರು 40 ಲಕ್ಷ ರೂಪಾಯಿ  ವೆಚ್ಚದಲ್ಲಿ `ಬರ್ನಿಂಗ್ ಮೆಷಿನ್’ ಖರೀದಿಸಲಾಗುವುದು. 14ನೇ ಹಣಕಾಸು ಯೋಜನೆಯಲ್ಲಿನ ಅನುದಾನವನ್ನು ಬಳಸಿ ಯಂತ್ರದ ಖರೀದಿಗೆ ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾಧಿಕಾರಿಗೆ ಅನುಮೋದನೆಗೆ ಕಳುಹಿಸಲಾಗಿದೆ ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ ಎ.ಎಂ. ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಅನುಮೋದನೆ ದೊರೆತ ಕೂಡಲೇ ಟೆಂಡರ್ ಕರೆದು ಯಂತ್ರಗಳನ್ನು ಖರೀದಿ ಮಾಡಲಾಗುವುದು. ನಗರ ಪಂಚಾಯತ್ ನಲ್ಲಿ ಸಂಗ್ರಹವಾದ ಕಸದ ವಿಲೇವಾರಿ ಮೊದಲಿಗೆ ನಡೆಸಲಾಗುವುದು. ಪ್ರತಿ ದಿನ ಒಂದು ಟನ್ ಒಣ ಕಸವನ್ನು ಸಂಸ್ಕರಣೆ ಮಾಡುವ ಯಂತ್ರವನ್ನು ತರಿಸಲಾಗುವುದು. ಕಲ್ಚರ್ಪೆಯಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿಯೇ ಯಂತ್ರಗಳ ಜೋಡಣೆ ಮಾಡಿ ಅಲ್ಲಿಯೇ ಸಂಸ್ಕರಣೆ ಮಾಡಲಾಗುವುದು. ಯಂತ್ರಗಳನ್ನು ತರುವ ಮೊದಲು ಕಲ್ಪರ್ಪೆಯಲ್ಲಿ ಶೇಖರಣೆಯಾಗಿರುವ ಕಸವನ್ನು ವಿಲೆವಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ನೀರಿನ ಟ್ಯಾಂಕ್‍ಗಳ ಸ್ವಚ್ಛತೆಗೆ ಕ್ರಮ
ನಗರ ಪಂಚಾಯತ್ ನ ವಿವಿಧ ವಾರ್ಡ್‍ಗಳಲ್ಲಿನ ಕುಡಿಯುವ ನೀರಿನ ಟ್ಯಾಂಕ್‍ಗಳ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗುವುದು. ಯಂತ್ರಗಳನ್ನು ಬಳಸಿ ಟ್ಯಾಂಕ್‍ಗಳನ್ನು ಸ್ವಚ್ಛ ಮಾಡಿ ಟ್ಯಾಂಕ್‍ನ ಒಳಗಡೆ ಬಣ್ಣ ಬಳಿದು, ಲೀಕೇಜ್‍ಗಳನ್ನು ಮುಚ್ಚಿ ಸಮರ್ಪಕವಾಗಿ ನಿರ್ವಹಣೆ ಮಾಡಲಾಗುವುದು. ನಾಳೆಯಿಂದ ಟ್ಯಾಂಕ್‍ಗಳನ್ನು ಸ್ವಚ್ಛತೆ ಮಾಡುವ ಕಾರ್ಯ ಆರಂಭವಾಗಲಿದೆ ಎಂದು ಮುಖ್ಯಾಧಿಕಾರಿ ಶ್ರೀಧರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror