ನಗರ ಪಂಚಾಯತ್ ನ ಕಸ ತೆರವು ಕಾರ್ಯಾಚರಣೆ ಸ್ಥಗಿತ; ರುಧ್ರಭೂಮಿಯಲ್ಲಿ ಕಸ ಹಾಕಿರುವುದಕ್ಕೆ ಸಾರ್ವಜನಿಕರ ವಿರೋಧ

October 25, 2019
9:34 PM

ಸುಳ್ಯ: ತ್ಯಾಜ್ಯ ಹಾಕಲು ಸ್ಥಳವಿಲ್ಲ ಎಂದು ನಗರ ಪಂಚಾಯಿತಿ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಸ್ಥಗಿತಗೊಂಡಿದೆ‌. ನಗರ ಪಂಚಾಯತ್ ಮುಂಭಾಗದ ಕಟ್ಟದಿಂದ ಕೆಲವು ಲೋಡ್ ಕಸವನ್ನು ಲಾರಿಯಲ್ಲಿ ಸಾಗಾಟ ಮಾಡಲಾಗಿದ್ದರೂ ಎರಡು ದಿನಗಳ ಬಳಿಕ ಅದು ಸ್ಥಗಿತಗೊಂಡಿದೆ. ಈ ಮಧ್ಯೆ ಕೆಲವು ಲೋಡ್ ಕಸವನ್ನು ಜಯನಗರದ ಸ್ಮಶಾನದ ಆವರಣದ ಒಳಗಡೆ ರಾಶಿ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ.

ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ನೇತೃತ್ವದಲ್ಲಿ ಸ್ಥಳೀಯರು ಜಮಾಯಿಸಿ ಕಸ ಹಾಕಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಸ್ಥಳದಲ್ಲಿ ಕಸ ಹಾಕಿ ಮಲಿನಗೊಳಿಸುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಸ್ಮಶಾನದ ಆವರಣದಿಂದ ಕಸವನ್ನು ಕೂಡಲೇ ತೆರವು ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಾಲಕೃಷ್ಣ ಭಟ್ ಹೇಳಿದರು. ಜಯನಗರದ ಸ್ಥಳೀಯರು ಕೆಲವರು ಶುಕ್ರವಾರ ಬೆಳಿಗ್ಗೆ ನಗರ ಪಂಚಾಯತ್ ಕಚೇರಿಗೆ ಆಗಮಿಸಿ ಸ್ಮಶಾನದ ಆವರಣದಲ್ಲಿ ಕಸ ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕಸ ಹಾಕಿರುವುದು ವಿವಾದ ಆಗಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಸದಸ್ಯರು ಮತ್ತಿತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಗರದ ಕಸವನ್ನು ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಟ್ಟ ಕಾರಣ ನಗರ ಪಂಚಾಯಿತಿ ಪರಿಸರ ಅಕ್ಷರಷಃ ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯಿತಿ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ನಗರ ಪಂಚಾಯಿತಿ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲು ಆರಂಭಿಸಿತ್ತು. ಆದರೆ ಎರಡು ದಿನ ಸಾಗಾಟದ ಬಳಿಕ ಸ್ಥಗಿತಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror