ನಪಂ ಚುನಾವಣೆ: ಬಂಡಾಯ ಅಭ್ಯರ್ಥಿಗಳ ಮೇಲೆ ಶಿಸ್ತು ಕ್ರಮ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

May 24, 2019
7:25 PM

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪಕ್ಷವು ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಚುನಾವಣಾ ಸ್ಪರ್ಧೆಗೆ ಆಕಾಂಕ್ಷಿಗಳು ಇರುವುದು ಸಹಜ. ಆದರೆ ಪಕ್ಷದ ತೀರ್ಮಾನ, ಶಿಸ್ತನ್ನು ಎಲ್ಲರೂ ಪಾಲಿಸಬೇಕು. ಬಂಡಾಯವಾಗಿ ನಾಮಪತ್ರ ಸಲ್ಲಿಸಿದವರ ಜೊತೆ ಪಕ್ಷದ ನಾಯಕರು ಮಾತುಕತೆ ನಡೆಸಿ ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಲಾಗಿತ್ತು. ಆದರೆ ಕೆಲವರು ನಾಮಪತ್ರ ಹಿಂಪಡೆಯದೆ ಸ್ಪರ್ಧಾ ಕಣದಲ್ಲಿ ಇದ್ದಾರೆ. ಅಂತವರ ವಿರುದ್ಧ ಬ್ಲಾಕ್ ಅಧ್ಯಕ್ಷರ ವರದಿಯ ಆಧಾರದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು. ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹಿರಿಯರನ್ನು ಮತ್ತು ಹೊಸ ಮುಖಗಳು ಸೇರಿ ಉತ್ತಮ ತಂಡವನ್ನು ಕಣಕ್ಕಿಳಿಸಲಾಗಿದೆ. ಈ ಬಾರಿ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ‌ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನಗರ ಪಂಚಾಯತ್ ಚುನಾವಣೆಗೆ ಹೋಲಿಸುವಂತಿಲ್ಲ. ಸ್ಥಳೀಯ ಸಮಸ್ಯೆಗಳೇ ಇಲ್ಲಿ ಚುನಾವಣಾ ವಿಷಯ. ಸುಳ್ಯದಲ್ಲಿ ಹಲವು ಸಮಸ್ಯೆಗಳಿದ್ದು ಅದರ ಪರಿಹಾರ ಮಾಡಲು ಮೂರು ಬಾರಿ ಆಡಳಿತ ನಡೆಸಿದ ಬಿಜೆಪಿ ವಿಫಲವಾಗಿದೆ ಎಂದು ದೂರಿದರು.
ಕೆಪಿಸಿಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಮಡಿಕೇರಿ ನಗರ ಸಭೆ ಮಾಜಿ ಅಧ್ಯಕ್ಷ ನಂದಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಕೆ.ಎಂ.ಮುಸ್ತಫಾ, ಕೆ.ಗೋಕುಲ್ ದಾಸ್, ಧೀರಾ ಕ್ರಾಸ್ತಾ, ಚಂದ್ರಕುಮಾರ್, ಸುಜಯಾಕೃಷ್ಣ, ಶಶಿಧರ ಎಂ.ಜೆ, ಶ್ರೀಲತಾ ಪ್ರಸನ್ನ, ಎಸ್.ಎಂ.ಉಮ್ಮರ್, ಬಾಲಕೃಷ್ಣ ಭಟ್ ಕೊಡೆಂಕೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಸತೀಶ್ ಕೂಜುಗೋಡು, ಲಕ್ಷ್ಮಿ ಸುಬ್ರಹ್ಮಣ್ಯ, ರಫೀಕ್ ಪಡು, ಸುಧೀರ್ ರೈ ಮೇನಾಲ, ಎಸ್.ಸಂಶದುದ್ದಿನ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror