ಗುತ್ತಿಗಾರು : ನರೇಂದ್ರ ಮೋದಿ ಅವರು ಮತ್ತೆ ಪ್ರಧಾನ ಮಂತ್ರಿಯಾಗಬೇಕು ಹಾಗೂ ಪೂರ್ಣ ಬಹುಮತ ಲಭ್ಯವಾಗಬೇಕು, ಸ್ವಚ್ಛ ಆಡಳಿತ ನಡೆಸುವಂತಾಗಬೇಕು ಎಂದು ಗುತ್ತಿಗಾರಿನ ಉಣ್ಣಿಕೃಷ್ಣನ್ ಅವರು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಹವನ ಮತ್ತು ಮಹಾಪೂಜಾ ಸೇವೆಯನ್ನುನಡೆಸಿದರು.
ಇಂದು ವಾರಣಾಸಿಯಲ್ಲಿ ಚುನಾವಣೆ ನಡೆಯುತ್ತಿದೆ. ಈ ಕಾರಣದಿಂದ ನರೇಂದ್ರ ಮೋದಿ ಅವರಿಗೆ ದೈವಿಕ ಶಕ್ತಿಯೂ ಲಭ್ಯವಾಗಲಿ ಎಂದು ಪ್ರಾರ್ಥನೆ ಮಾಡಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು “ಸುಳ್ಯನ್ಯೂಸ್.ಕಾಂ” ಗೆ ಉಣ್ಣಿಕೃಷ್ಣನ್ ತಿಳಿಸಿದ್ದಾರೆ.
ಈ ಸಂದರ್ಭ ಪ್ರಮುಖರಾದ ವೆಂಕಟ್ ದಂಬೆಕೋಡಿ ಮತ್ತಿತರರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನಮೋ ಮತ್ತೆ ಪ್ರಧಾನಿಯಾಗಲೆಂದು ವಳಲಂಬೆ ದೇವಸ್ಥಾನದಲ್ಲಿ ಪೂಜೆ"