ನರೇಂದ್ರ ಪ.ಪೂ. ಕಾಲೇಜು ವತಿಯಿಂದ ಕುರಿಯ ಗ್ರಾಮದಲ್ಲಿ ವೃಕ್ಷಾರೋಪಣ

August 4, 2019
4:00 PM

ಪುತ್ತೂರು: ವಿದ್ಯಾರ್ಥಿಗಳಲ್ಲಿ ಕಂಡು ಬರುತ್ತಿರುವ ಗಿಡನೆಡುವ ಉತ್ಸಾಹವು ಹಿರಿಯರಾದ ನಮಗೆ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಪ್ರೇರಣೆಯಾಗಿದೆ ಎಂದು ಗ್ರಾಮ  ಪಂಚಾಯತ್ ಸದಸ್ಯರಾದ  ರೇಖನಾಥ್ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದ ಗ್ರಾಮ ವಿಕಾಸ ಯೋಜನೆಯಲ್ಲಿ ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಇದರ ವತಿಯಿಂದ ನೈತಾಡಿ ಹಾಗೂ ಕುರಿಯ ಗ್ರಾಮದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಇದರ ವತಿಯಿಂದ ನೈತಾಡಿ ಹಾಗೂ ಕುರಿಯ ಗ್ರಾಮದ ಸುಮಾರು 50 ಮನೆಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ವೃಕ್ಷಾರೋಪಣ 2019 ಎಂಬ ವಿಶಿಷ್ಟ ಕಲ್ಪನೆಯಲ್ಲಿ ಸಾಕಾರಗೊಂಡ ಈ ವನಮಹೋತ್ಸವ ಕಾರ್ಯಕ್ರಮವು ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯನ್ನಲ್ಲದೆ ಸಮಾಜ ದರ್ಶನದ ಅನುಭವವನ್ನೂ ನೀಡಿತು.

ಕಾರ್ಯಕ್ರಮದ ಯಶಸ್ಸಿಗೆ ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ತಾಲೂಕು ಪಂಚಾಯತ್ ಸದಸ್ಯರಾದ  ಶಿವರಂಜನ್, ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರೂಪಲೇಖ, ಸಂಚಾಲಕರಾದ ವಿಜಯಕೃಷ್ಣ ಭಟ್ , ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ , ಗ್ರಾಮಸ್ಥರಾದ ಯಶವಂತ್, ಅಭಿಷೇಕ್, ಚಂದ್ರಪ್ರಕಾಶ್, ಚಂದ್ರಹಾಸ ರೈ ಡಿಂಬ್ರಿ, ಪುರಂದರ, ಸಂಯೋಜಕ ಉಪನ್ಯಾಸಕರಾದ ವಿಘ್ನೇಶ ವೈ , ಹಾಗೂ ಉಪನ್ಯಾಸಕರು , ವಿದ್ಯಾರ್ಥಿಗಳು ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror