ನಾಡಿನೆಲ್ಲೆಡೆ ಆಯುಧ ಪೂಜಾ ಸಂಭ್ರಮ

October 7, 2019
6:28 PM

ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನಲ್ಲಿ ವಿಜೃಂಭಣೆಯ ಆಯುಧ ಪೂಜಾ ಉತ್ಸವ ನಡೆಯಿತು. ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಮಹೋತ್ಸವದ ವಿಜೃಂಭಣೆಯ ಮಧ್ಯೆಯೇ ಸೋಮವಾರ ಆಯುಧ ಪೂಜೆ’ಯ ಸಂಭ್ರಮ ಕಂಡು ಬಂತು.

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು. ದೇವಸ್ಥಾನಗಳಲ್ಲಿ ನಡೆದ ಆಯುಧ ಪೂಜೆಯಲ್ಲಿ ಸಾವಿರಾರು ವಾಹನಗಳನ್ನು ಪೂಜಿಸಲು ತರಲಾಗಿತ್ತು.

ವಿವಿಧ ಸರಕಾರಿ ಕಚೇರಿಗಳಲ್ಲಿ, ವಿವಿಧ ಸಂಸ್ಥೆಗಳ ಕಚೇರಿ, ಅಂಗಡಿ, ಗ್ಯಾರೇಜ್, ಮಳಿಗೆ ಸಹತ ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿ ವಿವಿಧೆಡೆ ಸಂಭ್ರಮದಿಂದ ಆಯುಧ ಪೂಜೆ ನಡೆಯಿತು. ಎಲ್ಲೆಡೆ ವರ್ಣಮಯ ಶೃಂಗಾರವನ್ನು ಮಾಡಲಾಗಿತ್ತು. ಸಾವಿರಾರು ವಾಹನಗಳ ಪೂಜೆ ನಡೆಸಲಾಯಿತು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ದಸರಾ ಉತ್ಸವ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಸುಳ್ಯ ಶಾರದಾಂಬಾ ಉತ್ಸವದ ವೇದಿಕೆಯಲ್ಲಿಯೂ ಆಯುಧ ಪೂಜೆ ನಡೆಯಿತು. ನೂರಾರು ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.
ಸೋಮವಾರ ಬೆಳಿಗ್ಗೆ ಆರಂಭಗೊಂಡ ಆಯುಧ ಪೂಜಾ ಉತ್ಸವ ರಾತ್ರಿಯವರೆಗೂ ಮುಂದುವರಿಯಿತು.

ಸರಕಾರಿ ಮತ್ತು ಖಾಸಗಿ ಬಸ್‌ಗಳ ಸಹಿತ ಎಲ್ಲಾ ವಾಹನಗಳನ್ನು ಶ್ರೀಗಂಧ, ವೈವಿಧ್ಯಮಯ ಹೂವುಗಳಿಂದ ಅಲಂಕರಿಸಲಾಗಿತ್ತು. ಆಯುಧ ಪೂಜೆ ಪ್ರಯುಕ್ತ ಹೂ, ಹಣ್ಣು ಹಂಪಲು, ತೆಂಗಿನ ಕಾಯಿ, ನಿಂಬೆ ಹಣ್ಣಿಗೆ ಭಾರೀ ಬೇಡಿಕೆ ಇತ್ತು. ರಸ್ತೆ ಬದಿಗಳಲ್ಲಿಯೂ ಹೂವಿನ ಮಾರಾಟದ ಭರಾಟೆ ಕಂಡು ಬಂದಿತ್ತು. ಸೇವಂತಿಗೆ, ಮಲ್ಲಿಗೆ ಮತ್ತಿತರ ಹೂವುಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತ್ತು. ಆಯುಧ ಪೂಜೆಗೆ ಲಿಂಬೆಹಣ್ಣು ಮತ್ತು ಹಸಿ ಮೆಣಸಿನ ಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತಿದ್ದು ಹೆಚ್ಚಿನ ಬೇಡಿಕೆ ಇತ್ತು ಎನ್ನುತ್ತಾರೆ ವ್ಯಾಪಾರಿಗಳು.
ಹಲವು ಕಡೆಗಳಲ್ಲಿ ಭಾನುವಾರವೂ ವಾಹನಗಳ ಪೂಜೆ ನಡೆದಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror