ನಿವೃತ್ತ ಲೋಕಾಯುಕ್ತ ಎನ್​. ವೆಂಕಟಾಚಲ ವಿಧಿವಶ

October 30, 2019
10:35 AM

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್​. ವೆಂಕಟಾಚಲ (90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದ ಲೋಕಾಯುಕ್ತರಾಗಿ, ಸುಪ್ರಿಂಕೋರ್ಟ್ ನ್ಯಾಯಧೀಶರಾಗಿ ಸೇವೆ ಸಲ್ಲಿಸಿದ್ದರು.ಬೆಳಗಿನ ಜಾವ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ನಂಜೇಗೌಡ ವೆಂಕಟಾಚಲ ಅವರ ಪೂರ್ಣ ಹೆಸರು. ಇವರು 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು.

ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಇವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಿವೃತ್ತರಾದರು.
ಕರ್ನಾಟಕದ ಲೋಕಾಯುಕ್ತರಾಗಿದ್ದ ಸಂದರ್ಭದಲ್ಲಿ ವೆಂಕಟಾಚಲ ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು.

ಲೋಕಾಯುಕ್ತರಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪಣ ತೊಟ್ಟಿದ್ದರು. ಸುಳ್ಯಕ್ಕೂ ಬಂದಿದ್ದ ಅವರು ತಾಲೂಕು ಕಚೇರಿ, ನಗರ ಪಂಚಾಯತ್ ಗೆ ಭೇಟಿ ನೀಡಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror