ನೆರೆ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಶ್ರೀರಾಮಚಂದ್ರಾಪುರ ಮಠ

August 13, 2019
5:31 PM

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂದಾರು- ಮೊಗ್ರು ಗ್ರಾಮದ ಪ್ರವಾಹ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸುವ ಮಹತ್ವದ ಯೋಜನೆಯನ್ನು ಶ್ರೀರಾಮಚಂದ್ರಾಪುರ ಮಠ  ಪ್ರಕಟಿಸಿದೆ.

ಬೆಳ್ತಂಗಡಿ ತಾಲೂಕಿನ ಬಂದಾರು- ಮೊಗ್ರು ಗ್ರಾಮಗಳ ಸಂಪರ್ಕ ಸೇತುವಾಗಿದ್ದ ತೂಗುಸೇತುವೆ ಪ್ರವಾಹಕ್ಕೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ಈ ಗ್ರಾಮಗಳ ಹತ್ತಾರು ಮಕ್ಕಳು ಶಾಲೆಗಳಿಗೆ ತೆರಳಲು ಸಾಧ್ಯವಾಗದೇ ಶಿಕ್ಷಣದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಸಂತ್ರಸ್ತ ಮಕ್ಕಳ ಅಸಹಾಯಕ ಸ್ಥಿತಿಗೆ ಸ್ಪಂದಿಸಿದ ಶ್ರೀಮಠ ತಕ್ಷಣದಿಂದಲೇ ಉಭಯ ಗ್ರಾಮಗಳ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ.

 

ನೇತ್ರಾವತಿ ನದಿಗೆ ಮುಗೇರಡ್ಕ ಎಂಬಲ್ಲಿ ಅಡ್ಡಲಾಗಿ ಕಟ್ಟಿದ್ದ ತೂಗುಸೇತುವೆ ಈ ತಿಂಗಳ 8 ರಂದು  ಶ್ರೀಮಠದ ಅಂಗಸಂಸ್ಥೆಯಾದ ಉರುವಾಲಿನ ಶ್ರೀಭಾರತೀ ವಿದ್ಯಾಸಂಸ್ಥೆಯಲ್ಲಿ ಈ ಗ್ರಾಮಗಳ ಮಕ್ಕಳಿಗೆ ಉಚಿತವಾಗಿ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಶ್ರೀಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಭಟ್ ಪ್ರಕಟಿಸಿದ್ದಾರೆ.

ಈಗಾಗಲೇ ಬಾಗಲಕೋಟೆ ಜಿಲ್ಲೆಯಲ್ಲಿ ನೆರೆಯಿಂದ ಹಾನಿಗೀಡಾಗಿರುವ ಶಿವಯೋಗ ಮಂದಿರದ ಗೋವುಗಳಿಗೆ ಒಂದು ಲೋಡ್ ಮೇವನ್ನು ಶ್ರೀಮಠದ ವತಿಯಿಂದ ವಿತರಿಸಲಾಗಿದ್ದು, ಹಾನಗಲ್ ಮಠದ ಗೋಶಾಲೆಗೆ ಒಂದು ಲೋಡ್ ಮೇವು ವಿತರಿಸಲಾಗಿದೆ. ಶಿವಯೋಗ ಮಂದಿರಕ್ಕೆ ಸಿಂಧನೂರಿನಿಂದ ಎರಡು ಲೋಡ್ ಹಾಗೂ ದಾವಣಗೆರೆಯಿಂದ ಒಂದು ಲೋಡ್ ಮೇವನ್ನು ಗೋ ಪರಿವಾರ ವತಿಯಿಂದ ವಿತರಿಸಲಾಗಿದೆ.  ಶ್ರೀಮಠದ ನೂರಾರು ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶ್ರೀಮಠದ ಸೇವಾ ವಿಭಾಗದ ವತಿಯಿಂದ ಸಂತ್ರಸ್ತರಿಗೆ ಜೀವನಾವಶ್ಯಕ ಸಾಮಗ್ರಿಗಳನ್ನು ಪೂರೈಸಲಾಗಿದೆ. ಈಗಾಗಲೇ ಶ್ರೀಮಠದ ಎಲ್ಲ ಅಂಗಸಂಸ್ಥೆಗಳಲ್ಲಿ ನೆರೆ ಸಂತ್ರಸ್ತರಿಗೆ ಊಟೋಪಚಾರ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ
April 14, 2026
7:05 AM
by: ದ ರೂರಲ್ ಮಿರರ್.ಕಾಂ
ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
April 13, 2026
11:30 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror