ನೆರೆ ಹಾನಿ ಪ್ರದೇಶಕ್ಕೆ 30 ಕೋಟಿ ಬಿಡುಗಡೆ

October 26, 2019
7:22 PM

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನೆರೆಹಾವಳಿಯಿಂದ ಕೃಷಿ ಭೂಮಿಗಳು ಹಾಗೂ ಕಿಂಡಿಅಣೆಕಟ್ಟುಗಳು, ಸೇತುವೆಗಳು ಹಾನಿಯಾಗಿದ್ದು ಇವುಗಳ ದುರಸ್ತಿ ಗೆ 30 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು  ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಬಳಿಕ ಪ್ರವಾಹ ಪೀಡಿತ ಪ್ರದೇಶಗಳಾದ ಕುಕ್ಕಾವು, ಪರ್ಲಾಣಿ, ಚಾರ್ಮಾಡಿ ಅರಣೆಪಾದೆ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.  ಅಣೆಕಟ್ಟುಗಳು, ಸೇತುವೆಗಳು ಹಾನಿಯಾಗಿದ್ದು ಮಳೆ ಕಡಿಮೆಯಾದ ತಕ್ಷಣ ಹಾನಿಯಾದ ಕಿಂಡಿಅಣೆಕಟ್ಟುಗಳ ದುರಸ್ಥಿ ಕಾರ್ಯ ಮಾಡಲಾಗುವುದು. ಅಲ್ಲದೆ ನೀರು, ಕೃಷಿ ಭೂಮಿಗೆ ಬರದ ರೀತಿಯಲ್ಲಿ ತಡೆಗೋಡೆ ನಿರ್ಮಾಣ ಮಾಡುವ ಬಗ್ಗೆ ಇಲ್ಲಿನ ಶಾಸಕರು ಈಗಾಗಲೇ ಮನವಿಮಾಡಿದ್ದು ಈ ಬಗ್ಗೆ ಇಲಾಖೆ ಗಂಭೀರವಾಗಿ ಚಿಂತಿಸಿದೆ ಎಂದರು.

ಶಾಸಕ ಹರೀಶ್ ಪೂಂಜಾ ತಾಲೂಕಿನಲ್ಲಿ ಹಾನಿಗೊಳಗಾದ ಪ್ರದೇಶದ ಬಗ್ಗೆ ಸಚಿವರಲ್ಲಿ ಮಾಹಿತಿ ನೀಡಿದರು. ಬಳಿಕ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸಚಿವರು ಅನುದಾಣ ಬಿಡುಗಡೆಗೊಳಿಸುವ ಕುರಿತು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶೈಲಜಾ, ಜಿ.ಪಂ ಸದಸ್ಯೆ ಸೌಮ್ಯಲತಾ ಜಯಂತ್ ಗೌಡ, ತಾ.ಪಂ ಸದಸ್ಯ ಕೊರಗಪ್ಪ ಗೌಡ, ಸಣ್ಣ ನೀರಾವರಿ ಇಲಾಖಾ ಅಧೀನ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಸಹಾಯಕ ಇಂಜಿನಿಯರ್ ಪ್ರಸನ್ನ, ರಾಕೇಶ್, ತಹಶಿಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಜಯಕೀರ್ತಿ, ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror