ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಒಂದು ದಿನ ಮಾತ್ರ ಬಾಕಿ ಉಳಿದಿರುವಂತೆ ನಗರದಲ್ಲಿ ಚುನಾವಣಾ ಬಹಿಷ್ಕಾರದ ಕೂಗು ಕೇಳಿ ಬಂದಿದೆ.ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ನ.ಪಂ.ಚುನಾವಣೆ ಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದು ಬ್ಯಾನರ್ ಅಳವಡಿಸಿದ್ದಾರೆ.
ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ನಿಲ್ದಾಣ ನಿರ್ಮಾಣಕ್ಕಾಗಿ ಹಲವು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಸ್ಪಂದನೆ ದೊರೆಯದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗ ಇರುವ ನಿಲ್ದಾಣವನ್ನು ಸುಸಜ್ಜಿತವಾಗಿ ಮಾಡಿ ಅದಕ್ಕೆ ನಾಮಫಲಕ ಅಳವಡಿಸಬೇಕು. ಖಾಸಗೀ ವಾಹನಗಳ ನಿಲುಗಡೆಗೆ ಅವಕಾಶ ನೀಡಬಾರದು. ನಗರದ ವಿವಿದೆಡೆ ಟೂರಿಸ್ಟ್ ವಾಹನಗಳಿಗೆ ತಂಗಲು ಸುಸಜ್ಜಿತ ವ್ಯವಸ್ಥೆ ಮಾಡಬೇಕು ಎಂಬುದು ನಮ್ಮ ಬೇಡಿಕೆ. ಈ ಬೇಡಿಕೆ ಈಡೇರದ ಕಾರಣ ಟೂರಿಸ್ಟ್ ಚಾಲಕ, ಮಾಲಕರು ಮತ್ತು ಅವರ ಕುಟುಂಬದವರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಂಘದ ಪದಾಧಿಕಾರಿಗಳು ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನ.ಪಂ.ಚುನಾವಣೆ : ಟೂರಿಸ್ಟ್ ವಾಹನ ಚಾಲಕರಿಂದ ಚುನಾವಣಾ ಬಹಿಷ್ಕಾರ"