ನ.ಪಂ.ಚುನಾವಣೆ: ನಾಳೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿ ಸಿದ್ಧ

May 10, 2019
8:30 PM

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆಗೆ ಸಿದ್ಧವಾಗಲಿದೆ.
ಪ್ರತಿ ವಾರ್ಡ್ ಗಳಲ್ಲಿಯೂ ಕಾರ್ಯಕರ್ತರ ಸಭೆ ನಡೆಸಿ ಅಲ್ಲಿ ಸೂಚಿಸಲ್ಪಟ್ಟ ಅಭ್ಯರ್ಥಿ ಗಳ ಪಟ್ಟಿಯನ್ನು ತಯಾರಿಸಿ ಮಂಡಲ ಸಮಿತಿಗೆ ಕಳಿಸಲಾಗಿದೆ. ಮಂಡಲ ಸಮಿತಿಯ ಪ್ರಮುಖರನ್ನೊಳಗೊಂಡ ಚುನಾವಣಾ ನಿರ್ವಹಣಾ ಸಮಿತಿ ಮತ್ತು ನಗರ ಶಕ್ತಿ ಕೇಂದ್ರದ ಪದಾಧಿಕಾರಿಗಳು ಪಟ್ಟಿಯನ್ನು ಪರಿಶೀಲನೆ ನಡೆಸಿ ಅಳೆದು ತೂಗಿ ಅಭ್ಯರ್ಥಿಯ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು. ಒಬ್ಬರೇ ಆಕಾಂಕ್ಷಿ ಇರುವ ಕಡೆ, ಮೀಸಲು ಕ್ಷೇತ್ರಗಳಲ್ಲಿ ಅಭ್ಯರ್ಥಿಯ ಆಯ್ಕೆ ಬಹುತೇಕ ಅಂತಿಮಗೊಳಿಸಲಾಗಿದೆ. 3-4 ಹೆಸರುಗಳು ಇರುವ ಕಡೆ ಅಭ್ಯರ್ಥಿಯ ಆಯ್ಕೆಯ ಚರ್ಚೆ ನಡೆಯುತಿದೆ. ಶನಿವಾರ ಸಂಜೆಯ ವೇಳೆಗೆ ಬಹುತೇಕ ಪಟ್ಟಿ ಸಿದ್ಧಗೊಳ್ಳಲಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement

ಸೋಮವಾರದಿಂದ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಕೆಲವೆಡೆ ಆಕಾಂಕ್ಷಿಗಳ ಸಾಲು ಉದ್ದ ಇದ್ದು ಅಭ್ಯರ್ಥಿಯನ್ನು ಅಂತಿಮಗೊಳಿಸಲು ಮ್ಯಾರಥಾನ್ ಚರ್ಚೆ ನಡೆಯುತ್ತಿದೆ. ಬಹುತೇಕ ವಾರ್ಡ್ ಗಳಲ್ಲಿ ಮೂರು ಮತ್ತು ನಾಲ್ಕು ಹೆಸರುಗಳು ಸೂಚಿಸಲ್ಪಟ್ಟಿದೆ. ನಗರ ಪಂಚಾಯತ್ ನ ಸಾಮಾನ್ಯ ಮಹಿಳಾ ವಾರ್ಡ್ ಒಂದರಲ್ಲಿ 8 ಮಂದಿ ಆಕಾಂಕ್ಷಿಗಳಿರುವುದು ಕುತೂಹಲ ಕೆರಳಿಸಿದೆ.

Advertisement

ಶೇ. 100 ರಷ್ಟು ಹೊಸ ಮುಖಗಳ ಆಯ್ಕೆಗೆ ಬಿಜೆಪಿ ನೇತೃತ್ವ ಒತ್ತು ನೀಡಿದೆ. ಹಳೆಯ ಎಲ್ಲಾ ಸದಸ್ಯರನ್ನೂ ಬದಲಿಸಿ ನಗರ ಪಂಚಾಯತ್ ನ 20 ವಾರ್ಡ್ ಗಳಲ್ಲಿಯೂ ಹೊಸ ಅಭ್ಯರ್ಥಿ ಆಯ್ಕೆಗೆ ಪ್ರಯತ್ನ ನಡೆಸುತ್ತಿರುವುದಾಗಿ ಮುಖಂಡರು ತಿಳಿಸಿದ್ದಾರೆ. ಆದರೆ ಕೆಲವು ಮಂದಿ ಮಾಜಿ ಸದಸ್ಯರು ಟಿಕೆಟ್ ಬೇಡಿಕೆ ಮುಂದಿಟ್ಟಿರುವುದಾಗಿ ತಿಳಿದು ಬಂದಿದೆ. ಇದರಿಂದ ಕೊನೆಯ ಕ್ಷಣದಲ್ಲಿ ಒಂದೆರಡು ಮಂದಿ ಹಳೆಯ ಮುಖಗಳು ಮತ್ತೆ ಕಣದಲ್ಲಿ ಕಾಣಿಸಿ ಕೊಳ್ಳುವ ಸಾಧ್ಯತೆಯೂ ಇದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror