ನ ಪಂ ಚುನಾವಣೆ : ಬಿಜೆಪಿಯಲ್ಲಿ ಮಾಜಿಗಳಿಗೆ ಟಿಕೆಟ್ ಇಲ್ಲ

May 15, 2019
9:00 PM

ಸುಳ್ಯ. ನಗರ ಪಂಚಾಯತ್ ಚುನಾವಣೆಗೆ ಬಿಜೆಪಿಯ 20 ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದ್ದು ಕಳೆದ ಆಡಳಿತ ಮಂಡಳಿಯಲ್ಲಿದ್ದ ಯಾವ ಸದಸ್ಯರಿಗೂ ಈ ಬಾರಿ ಟಿಕೇಟ್ ನೀಡಿಲ್ಲ. ಸಂಪೂರ್ಣ ಹೊಸ ಮುಖಗಳ ತಂಡವನ್ನು ಕಣಕ್ಕಿಳಿಸಲಾಗಿದೆ.

Advertisement
Advertisement

ಸತತ ಮೂರು ಬಾರಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿಗೆ ಸಹಜವಾಗಿ ಎದುರಾಗಬಹುದಾದ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ಹೊಸ ತಂತ್ರ ರೂಪಿಸಿದೆ. ಕಳೆದ ಬಾರಿ ಅಧ್ಯಕ್ಷರಾಗಿದ್ದ ಎನ್.ಎ.ರಾಮಚಂದ್ರ, ಪ್ರಕಾಶ್ ಹೆಗ್ಡೆ, ಶೀಲಾವತಿ ಮಾಧವ ಈ ಮೂವರು ಈ ಬಾರಿ ಕಣದಲ್ಲಿ ಇಲ್ಲ. ಹಿರಿಯ ಸದಸ್ಯರಾದ ಗೋಪಾಲ ನಡುಬೈಲು, ರಮಾನಂದ ರೈ, ಮೋಹಿನಿ ನಾಗರಾಜ್, ಮೀನಾಕ್ಷಿ ಕೂಡ ಈ ಬಾರಿ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಮಾಜಿ ಸದಸ್ಯರ ಪೈಕಿ ಸ್ಥಾನ ಪಡೆದವರು ಸರೋಜಿನಿ ಪೆಲ್ತಡ್ಕ ಮಾತ್ರ. 2008-13ರ ಅವಧಿಯ ನ.ಪಂ.ನಲ್ಲಿ ಸರೋಜಿನಿ ಸದಸ್ಯರಾಗಿದ್ದರು. ಪ್ರತಿ ವಾರ್ಡ್‍ಗಳ ಕಾರ್ಯಕರ್ತರ ಸೂಚನೆಯ ಮೇರೆಗೆ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗಿದೆ. ಹೊಸ ಹುರುಪಿನೊಂದಿಗೆ ಕೆಲಸ ಮಾಡಲಿ ಎಂಬ ದೃಷ್ಠಿಯಿಂದ ಹೊಸಬರಿಗೆ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. ಕೆಲವು ಹಿರಿಯ ಸದಸ್ಯರು ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರೂ ಸಂಪೂರ್ಣ ಹೊಸ ಮುಖಗಳಿಗೆ ಆದ್ಯತೆ ಎಂಬ ನಿಲುವನ್ನು ಬಿಜೆಪಿ ತಳೆದಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ
May 21, 2025
7:09 AM
by: ದ ರೂರಲ್ ಮಿರರ್.ಕಾಂ
ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?
May 20, 2025
9:44 PM
by: The Rural Mirror ಸುದ್ದಿಜಾಲ
ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ
May 20, 2025
7:53 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror