ಪಂಜಿಗಾರು ಬೊಬ್ಬೆಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ : ಅಧಿಕಾರಿಗಳ ಭರವಸೆ

June 24, 2019
7:24 PM

ಬೆಳ್ಳಾರೆ: ಪಂಜಿಗಾರು ಬೊಬ್ಬೆಕೇರಿ ರಸ್ತೆಯ ದುರಸ್ಥಿಗೆ ಆಗ್ರಹಿಸಿ ಅಂಬೇಡ್ಕರ್ ತತ್ವರಕ್ಷಣಾ ವೇದಿಕೆಯ ವತಿಯಿಂದ ಪಂಜಿಗಾರಿನಲ್ಲಿ ಸೋಮವಾರ  ಪ್ರತಿಭಟನೆ ನಡೆಯಿತು.

Advertisement
Advertisement
Advertisement
Advertisement

ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಮಾತನಾಡಿ,” ಶಾಸಕರು ಕ್ರಿಯಾಶೀಲರಾಗಿಲ್ಲ, ಯಾವುದೇ ಮನವಿಗೆ  ಸ್ಪಂದಿಸುವುದಿಲ್ಲ . ಅವರ ಸುಳ್ಳು ಭರವಸೆಗಳು ನಮಗೆ ಬೇಡ. ಈ ರಸ್ತೆ ತಕ್ಷಣವೇ ದುರಸ್ತಿಯಾಗಬೇಕು ” ಎಂದರು. 

Advertisement

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಕುಂಞ ಅಹಮ್ಮದ್  ಮತ್ತು ಇಂಜಿನಿಯರಿಂಗ್ ಇಲಾಖೆಯ ಮಣಿಕಂಠ, ಎಸ್.ಎಸ್ ಹುಕ್ಕೇರಿ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ತಕ್ಷಣವೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬಳಿಕ ಪ್ರತಿಭಟನೆ ಹಿಂತೆಗೆಯಲಾಯಿತು.

 

Advertisement

 

Advertisement

 

ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ರೈ ಪೋಲಾಜೆ ದೀಪ ಬೆಳಗಿ ಪ್ರತಿಭಟನಾ ಸಭೆಯನ್ನು  ಉದ್ಘಾಟಿಸಿದರು.  ಸಭೆಯಲ್ಲಿ ಮುಖಂಡರಾದ ಸರಸ್ವತಿ ಕಾಮತ್, ನ್ಯಾಯವಾದಿ ಪ್ರದೀಪ್ ಕುಮಾರ್,  ಪ್ರಮೋದ್‍ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಸುಂದರ ಪಾಟಾಜೆ, ಬಾಳಿಲ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹಾಗು 60 ಕ್ಕೂ ಹೆಚ್ಚು ಪ್ರತಿಭಟನಾ ಸ್ಥಳದಲ್ಲಿ ಉಪಸ್ಥಿತರಿದ್ದರು.

Advertisement

ಕೆ.ಕೆ ನಾಯ್ಕ್ ಪ್ರಸ್ತಾವಿಸಿದರು. ಸುಳ್ಯ ಸರ್ಕಲ್ ಇನ್‍ಸ್ಪೆಕ್ಟರ್ ಸತೀಶ್‍ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ಪೊಲೀಶ್ ಠಾಣೆಯ ಪ್ರೊಬೇಷನರಿ ಎಸ್‍ಐ ಆಂಜನೇಯ ರೆಡ್ಡಿ ಹಾಗೂ ಪೊಪೀಸ್   ಸಿಬ್ಬಂದಿಗಳು ಭದ್ರತಾ ವ್ಯವಸ್ಥೆಯನ್ನು ಏರ್ಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ
ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ
January 31, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror