ಪಠ್ಯದ ಅರಿವೊಂದೇ ಅಲ್ಲ , ಜಲದರಿವಿನ ಪ್ರಾಕ್ಟಿಕಲ್ ಪಾಠ ಇಲ್ಲಿದೆ

June 9, 2019
8:00 AM

ಈ ಶಾಲೆಯಲ್ಲಿ ಮಕ್ಕಳಿಗೆ ಪಾಠವನ್ನು ಅರೆದು ಮಕ್ಕಳ  ತಲೆಗೆ ತುಂಬಿಸುವುದಲ್ಲ. ಸರಕಾರಿ ಶಾಲೆಯ ವಿಜ್ಞಾನ  ಶಿಕ್ಷಕಿಯೊಬ್ಬರ ಕಾಳಜಿ, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ಆಸಕ್ತಿಯಿಂದ ಜಲ ಸಂರಕ್ಷಣೆಯ ಅರಿವಿನ ಪ್ರಾಕ್ಟಿಕಲ್ ಪಾಠ, ಬದುಕಿಗೆ ಬೇಕಾದ ಪಾಠವನ್ನು ಇಲ್ಲಿ ಮಾಡಲಾಗುತ್ತದೆ.  ಇಂತಹದ್ದೊಂದು ಕಾರ್ಯ ಕಳೆದ 3 ವರ್ಷಗಳಿಂದ ನಡೆಯುತ್ತಿದೆ. ಎಲ್ಲಾ ಶಾಲೆಗಳಲ್ಲೂ ಮಾಡಬಹುದಾದ ಈ ಸಣ್ಣ ಕಾರ್ಯದ ಪರಿಣಾಮ ಮಾತ್ರಾ ಅಪಾರ.

Advertisement

ಈ ಬಾರಿಯ ಬೇಸಗೆ  ಎಲ್ಲರಿಗೂ ಬೆವರು ಮಾತ್ರವಲ್ಲ ಕಣ್ಣೀರು ತರಿಸಿದ್ದು ಸತ್ಯ. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲೂ ವಿಪರೀತ ಸಂಕಷ್ಟ ಬಂದಿದೆ. ನೀರಿಗಾಗಿ ಹಾಹಾಕಾರ ಕಂಡುಬಂದಿತ್ತು. ಮಳೆಗಾಗಿ ಪ್ರಾರ್ಥನೆ ನಡೆದಿತ್ತು. ಹೀಗಾಗಿ ಈ ಬಾರಿ ನೀರಿನ ಮಹತ್ವ ತಿಳಿದಿದೆ. ಈ ಬರ ಬಾರದಂತೆ ಏನು ಮಾಡಬಹುದು  ಎಂಬ ಯೋಚನೆ ಹಲವರಲ್ಲಿ  ಕಾಡಿದೆ. ಇಂತಹ ಯೋಚನೆ ಬಂದಾಗ ಕೆಲವೊಂದು ಮಾದರಿ ಕಾರ್ಯಗಳನ್ನು  ಜನರ ಮುಂದೆ, ಆಸಕ್ತರ ಮುಂದೆ ತೆರೆದಿಡಬೇಕಾಗುತ್ತದೆ. ಕನಿಷ್ಟ ಒಬ್ಬರಾದರೂ ಈ ಪ್ರಯೋಗ ಮಾಡಿದರೆ ಭವಿಷ್ಯದಲ್ಲಿ ಅಷ್ಟು ಸಮಸ್ಯೆ ಕಡಿಮೆಯಾದೀತು.  ಪ್ರತೀ ತಾಲೂಕಿನಲ್ಲಿ  ಇಂತಹ ಶಿಕ್ಷಕರು ಇದ್ದರೆ ಬರವ ಮೆಟ್ಟಿ ನಿಲ್ಲಲು ಹೆಚ್ಚು ದಿನ ಬೇಕಾಗಿಲ್ಲ.

ಎಲ್ಲೆಡೆ ಜಲ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.  ಇದೊಂದು ಶಾಲೆಯಲ್ಲಿ  ಮಕ್ಕಳಿಗೆ ಕಲಿಸುವ ಪ್ರಾಕ್ಟಿಕಲ್ ಪಾಠ ರಾಜ್ಯಕ್ಕೆ ಮಾದರಿಯಾಗಿದೆ. ಅದು ಮಂಗಳೂರು ತಾಲೂಕಿನ ಬಡಗುಲಿಪಾಡಿ ಗ್ರಾಮದ ಮಳಲಿಯಲ್ಲಿರುವ ಸರಕಾರಿ  ಪ್ರೌಢಶಾಲೆ. ಇಲ್ಲಿನ ಮಕ್ಕಳು ಒಬ್ಬೊಬ್ಬರು ಕನಿಷ್ಟ ಒಂದೊಂದು ಇಂಗುಗುಂಡಿ ಮಾಡುತ್ತಾರೆ. ಶಾಲೆಯಲ್ಲಿ 250 ಮಕ್ಕಳು ಇದ್ದಾರೆ. ಕಳೆದ 3 ವರ್ಷಗಳಿಂದ ಈ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಆದರೆ ಒಬ್ಬ ವಿದ್ಯಾರ್ಥಿ ಒಂದು ಗುಂಡಿಯಲ್ಲ ಕನಿಷ್ಟ 10 ಗುಂಡಿಯಾದರೂ ಮಾಡುತ್ತಾರೆ. ಇಲ್ಲಿನ ಶಿಕ್ಷಕಿ ಪದ್ಮಶ್ರೀ ಮಳಲಿ ಆಸಕ್ತಿಯಿಂದ ಈ ಕೆಲಸದಲ್ಲಿ  ತೊಡಗಿಸಿಕೊಂಡಿದ್ದಾರೆ.

 

Advertisement

 

ಪ್ರತೀ ಬಾರಿ ಶಾಲೆ ಆರಂಭವಾದ ಕೂಡಲೇ ಈ ಕೆಲಸಕ್ಕೆ ಚಾಲನೆ ದೊರೆಯುತ್ತದೆ. ಜಲಜಾಗೃತಿ ಬಗ್ಗೆ ಅರಿವು ನೀಡಿ ತಂಡಗಳ ರಚನೆಯಾಗುತ್ತದೆ.  ಶಾಲೆಯಲ್ಲಿ ಜಾಗ ಇಲ್ಲ. ಅದಕ್ಕಾಗಿ ಮನೆಯಲ್ಲಿ ಅಥವಾ ಆಸುಪಾಸಿನ ಪ್ರದೇಶದಲ್ಲಿ ಇಂಗುಗುಂಡಿ ಮಾಡಲು ಹೇಳುತ್ತಾರೆ. ಇದಕ್ಕಾಗಿ ಮನೆಯವರ ಸಹಕಾರ ಕೇಳಲು ಸೂಚನೆ ಕೊಡಲಾಗುತ್ತದೆ. ತಂಡ ರಚನೆ ಮಾಡುವಾಗ ಆಯಾ ಪ್ರದೇಶದ ಮಕ್ಕಳನ್ನು ಸೇರಿಸಿ ತಂಡ ರಚನೆ ಮಾಡಲಾಗುತ್ತದೆ. ಹೀಗಾಗಿ ಕೆಲವು ತಂಡದಲ್ಲಿ 5-6 ಮಕ್ಕಳು ಇದ್ದರೆ ಕೆಲವು ತಂಡದಲ್ಲಿ 3-4 ಮಕ್ಕಳು ಇರುತ್ತಾರೆ.  ಎಲ್ಲಾ ಮಕ್ಕಳು ಕನಿಷ್ಟ ಒಂದು ಗುಂಡಿ ರಚನೆ ಮಾಡಲೇಬೇಕು. ಅದು ಅವರೇ ಮಾಡಬಹುದು ಅಥವಾ ಅವರ ಹೆತ್ತವರ ಸಹಾಯವನ್ನೂ ಪಡೆಯಬಹುದು.  ಒಟ್ಟಿನಲ್ಲಿ  ನೀರು ಉಳಿಸುವ ಹಾಗೂ ಜಲ ಸಂರಕ್ಷಣೆಯ ಅರಿವು ಮನಸ್ಸಿನಲ್ಲಿ  ಮೂಡಿಸುವುದು ಇದರ ಉದ್ದೇಶ ಎಂದು ಹೇಳುತ್ತಾರೆ ಶಿಕ್ಷಕಿ ಪದ್ಮಶ್ರೀ . ಕಳೆದ ವರ್ಷ 250 ಇಂಗು ಗುಂಡಿ ರಚನೆ ಆಗಿದೆ ಸತತ 3 ವರ್ಷಗಳಿಂದ ಈ ಪ್ರಯತ್ನ ಆಗಿದೆ.

 

 

Advertisement

ವಿದ್ಯಾರ್ಥಿಗಳು ಎಷ್ಟು ಆಸಕ್ತರಾಗಿದ್ದಾರೆ ಎಂದರೆ , ಈ ತಂಡ ರಚನೆಯಾದ ತಕ್ಷಣವೇ ಈ ಶಾಲೆಯ ವಿದ್ಯಾರ್ಥಿನಿ ಸುಪ್ರಿಯಾ ಒಬ್ಬಳೇ  16 ಇಂಗುಗುಂಡಿ   ಮಾಡಿದ್ದಾಳೆ , ಲಿಖಿತ್ ಎಂಬ ವಿದ್ಯಾರ್ಥಿ 20 ಇಂಗುಗುಂಡಿ ರಚನೆ ಮಾಡಿದ್ದಾರೆ. ಇದರ ಜೊತೆಗೆ ವಿಷ್ಣುಪ್ರಸಾದ್ , ಅಕ್ಷಯ್ , ಧನುಷ್ ಬಂಗೇರ , ಧನುಷ್, ಫಹಿಲ್, ಹರ್ಷಿತ್ , ಜಿತೇಶ್, ಧನರಾಜ್ ಇವರ ತಂಡ ಒಂದು ದೊಡ್ಡ ಗುಂಡಿ ಹಾಗೂ 2 ಸಣ್ಣ ಇಂಗು ಗುಂಡಿಯಲ್ಲಿ  ನಿರತವಾಗಿದೆ.  ವಿಖಿತಾ ಎಂಬ ವಿದ್ಯಾರ್ಥಿನಿ 3 ಇಂಗು ಗುಂಡಿ ಮಾಡಿದ್ದಾಳೆ. ಅಚ್ಚರಿ ಎಂದರೆ ಮಕ್ಕಳ ಈ ಕಾರ್ಯದಲ್ಲಿ ಹೆತ್ತವರೂ ಸಹಾಯ ಮಾಡುತ್ತಾರೆ. ಹೆತ್ತವರೂ ಭಾಗಿಯಾದರೆ ದಿನದಲ್ಲಿ ಅರ್ಧ ಗಂಟೆ ಕೆಲಸ..!.  ಈಗ ಶಾಲೆಯ ಆರಂಭವಾದ್ದರಿಂದ ಮಕ್ಕಳಿಗೆ ಓದಿನ ಕೆಲಸವೂ ಹೆಚ್ಚಿರುವುದಿಲ್ಲ. ಇಂಗು ಗುಂಡಿಯೂ ಅಷ್ಟೇ ಮಳೆಗಾಲದ ಮುಂದೆ ಮಾಡುವ ಕಾರ್ಯ.

 

 

ಈ ಶಾಲೆಯ ಜಲ ಜಾಗೃತಿ ಇಲ್ಲಿಗೇ ಮುಗಿಯುವುದಿಲ್ಲ , ಮಳೆಗಾಲದ ನಂತರ ಮತ್ತೆ ಆರಂಭವಾಗುತ್ತದೆ. ಮಳೆಗಾಲದ ನಂತರ   ಮಕ್ಕಳಿಂದಲೇ ಸಣ್ಣ ಸಣ್ಣ ಕಟ್ಟಗಳು ನಿರ್ಮಾಣವೂ ನಡೆಯುತ್ತದೆ, ಮಳಲಿ ಪ್ರದೇಶದಲ್ಲಿ ಅಷ್ಟೊಂದು ನೀರಿನ ಸಮಸ್ಯೆ ಇಲ್ಲ. ಹಾಗಿದ್ದರೂ ಮಕ್ಕಳಲ್ಲಿ  ಜಾಗೃತಿ ಮೂಡಿಸುತ್ತೇವೆ ಎಂದು ಶಿಕ್ಷಕಿ ಪದ್ಮಶ್ರೀ ಹೇಳುತ್ತಾರೆ. ವರ್ಷದ ಕೊನೆಗೆ ಜಲದರಿವಿನ ಯಶೋಗಾಥೆ ಎಂಬ ಪುಸ್ತಕವನ್ನೂ ಮಾಡುತ್ತೇವೆ ಇದು ಹಸ್ತಪತ್ರಿಕೆ , ಇದರಲ್ಲಿ ಮಕ್ಕಳೇ ನೀರಿನ ಬಗ್ಗೆ  ಬರೆಯುತ್ತಾರೆ, ಚಿತ್ರ ಮಾಡುತ್ತಾರೆ. ಇದು ಸಂಚಿಕೆಯ ರೂಪದಲ್ಲಿರುತ್ತದೆ ಎಂದು ಪದ್ಮಶ್ರೀ ಅವರು ಹೇಳುವಾಗ ಒಂದು ಸರಕಾರಿ ಶಾಲೆಯ ಶಿಕ್ಷಕಿಗೆ ಇರುವ ನೀರಿನ ಕಾಳಜಿ ಇಡೀ ರಾಜ್ಯಕ್ಕೆ ಮಾದರಿಯಾಗಬೇಕು. ಏಕೆಂದರೆ ಜಲಜಾಗೃತಿ ಮಕ್ಕಳಿಂದಲೇ ಆರಂಭವಾದರೆ ಭವಿಷ್ಯದಲ್ಲಿ ಬರದ ಮಾತು ಬಾರದಾದೀತು.

Advertisement

 

ಜಾಗೃತಿ ಆಗಬೇಕಿರುವುದು ಮಕ್ಕಳಲ್ಲಿ. ಸ್ವಚ್ಛ ಭಾರತ ಪರಿಕಲ್ಪನೆ ಈಗ ಫೋಕಸ್ ಮಾಡುತ್ತಿರುವುದು ಮಕ್ಕಳಲ್ಲಿ.  ಜಲದ ಅರಿವೂ ಹಾಗೆಯೇ, ಮಕ್ಕಳಲ್ಲಿ  ಈ ಗಲೇ ಜಾಗೃತಿ ಮೂಡಿದರೆ ಮಾತ್ರವೇ ಭವಿಷ್ಯದಲ್ಲಿ ಜಲದ ಅರಿವು ಹಾಗೂ ಉಳಿವು ಸಾಧ್ಯವಿದೆ.  ಮಕ್ಕಳಲ್ಲಿ ಜಲಜಾಗೃತಿ ಉಂಟಾದರೆ ಭವಿಷ್ಯದ ಬರದ ಮಾತಿರದು. ಅದೂ ಶಾಲೆಯಲ್ಲಿ  ಆರಂಭವಾದರೆ, ಶಿಕ್ಷಕರು ಈ ಮಾತು ಹೇಳಿದರೆ ಮಕ್ಕಳು ತಕ್ಷಣವೇ ಜಾರಿಗೆ ತರುತ್ತಾರೆ. ಹೀಗಾಗಿ ಶಾಲೆಗಳಲ್ಲಿ  ಈ ಬಗ್ಗೆ ಸಣ್ಣ ಪ್ರಯತ್ನ ಮಾಡಿದರೆ ಬರದ ಮಾತಿಗೆ ವಿದಾಯ ಹೇಳುವ ಪ್ರಯತ್ನಕ್ಕೆ ಮುನ್ನುಡಿ ಬರೆಯಬಹುದು.

 

 

 

Advertisement

 

 

 

 

 

Advertisement

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ
July 17, 2025
9:02 PM
by: The Rural Mirror ಸುದ್ದಿಜಾಲ
ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |
July 17, 2025
8:51 PM
by: The Rural Mirror ಸುದ್ದಿಜಾಲ
ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

ಪ್ರಮುಖ ಸುದ್ದಿ

MIRROR FOCUS

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ
ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ
July 17, 2025
9:02 PM
by: The Rural Mirror ಸುದ್ದಿಜಾಲ
ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |
July 17, 2025
8:51 PM
by: The Rural Mirror ಸುದ್ದಿಜಾಲ

Editorial pick

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಮನೆಗೆ ಇಡುವ ಹೆಸರನ್ನು ಯಾವ ಅಕ್ಷರದಿಂದ ಆರಂಭಿಸಿದರೆ ಉತ್ತಮ..?
July 18, 2025
6:28 AM
by: ದ ರೂರಲ್ ಮಿರರ್.ಕಾಂ
ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ
ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ
July 17, 2025
10:01 PM
by: The Rural Mirror ಸುದ್ದಿಜಾಲ
ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ
July 17, 2025
9:02 PM
by: The Rural Mirror ಸುದ್ದಿಜಾಲ
ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |
July 17, 2025
8:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 17-07-2025 | ಸಾಮಾನ್ಯ ಮಳೆ ಮುಂದುವರಿಕೆ ಎಷ್ಟು ದಿನ..? | ಜು.25 ರವರೆಗೂ ರಾಜ್ಯದಲ್ಲಿ ಹೇಗಿದೆ ಮಳೆ..?
July 17, 2025
8:37 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ | ದ ಕ ಜಿಲ್ಲಾಧಿಕಾರಿ ಭೇಟಿ
July 17, 2025
8:20 PM
by: The Rural Mirror ಸುದ್ದಿಜಾಲ
ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?
July 17, 2025
6:27 AM
by: ಮಹೇಶ್ ಪುಚ್ಚಪ್ಪಾಡಿ

ವಿಶೇಷ ವರದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ

OPINION

ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group