ಪಥ ಬದಲಿಸಿದ ವಾಯು : ಇನ್ನು ಕರಾವಳಿ ತೀರಕ್ಕೂ ಇದೆ ಇಫೆಕ್ಟ್

June 13, 2019
3:30 PM

ಅಹಮದಾಬಾದ್ : ಚಂಡಮಾರುತ ವಾಯು ಇದೀಗ ಪಥ ಬದಲಿಸಿದೆ. ಗುಜರಾತ್ ಕಡಲು ತೀರದಲ್ಲಿ  ಭಾರೀ ಗಾಳಿ ಹಾಗೂ ಮಳೆ ಕಂಡುಬಂದು ಆತಂಕಕ್ಕೆ ಕಾರಣವಾಗಿತ್ತು. ಆದರೆ ರಾತ್ರಿ ವೇಳೆಗೆ ಪಥ ಬದಲಿಸಿದೆ. ಹೀಗಾಗಿ ಗುಜರಾತ್ ಕಡೆಗೆ ಈಗ ಚಂಡಮಾರುತ ಹೊಡೆತ ತಪ್ಪಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ಕರಾವಳಿ ತೀರದ ಸುಮಾರು 250000 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಈಗಿನ ಮಾಹಿತಿ ಪ್ರಕಾರ ಪೋರಬಂದರ್, ದ್ವಾರಕಾ , ಮಹುವಾ ಬೀಚ್ ಗಳ  ಸಮೀಪವಾಗಿ ಚಂಡಮಾರುತ ಸಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರಾವಳಿ ತೀರಕ್ಕೆ ಇನ್ನೂ ಅಪಾಯ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ವಾಯು ಚಂಡ ಮಾರುತ ಪಥ ಬದಲಿಸಿದರೂ ರೆಡ್ ಎಲರ್ಟ್ ಇನ್ನೂ ಇದೆ.

ಕರ್ನಾಟಕದಲ್ಲೂ ವಾಯು ಚಂಡಮಾರುತ ಪರಿಣಾಮ ಉಂಟಾಗಿದ್ದು, ಕರಾವಳಿ ಪ್ರದೇಶದಲ್ಲಿ  ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ
June 10, 2026
2:56 PM
by: ಮಿರರ್‌ ಡೆಸ್ಕ್
ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!
June 9, 2026
11:32 PM
by: ದ ರೂರಲ್ ಮಿರರ್.ಕಾಂ
ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ
June 9, 2026
11:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror