ಪಿಲಿಕುಳ ನಿಸರ್ಗಧಾಮ- ಮಕ್ಕಳಿಗೆ ಬೇಸಿಗೆ ಶಿಬಿರ

March 5, 2020
6:14 PM

ಮಂಗಳೂರು: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಹತ್ತು ದಿನಗಳ ರಜಾ ಮಜಾ ‘ಪಿಲಿಕುಳ ಬೇಸಿಗೆ ಶಿಬಿರ-2020’ ನ್ನು ಎಪ್ರಿಲ್ 20 ರಿಂದ 29 ರವರೆಗೆ ನಡೆಸಲಾಗುವುದು.

ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಪಿಲಿಕುಳದ ಎಲ್ಲಾ ವಿಭಾಗಗಳ ಪ್ರವೇಶಕ್ಕೆ ಅವಕಾಶವಿದ್ದು, ಮಂಗಳೂರಿನಿಂದ ಆಗಮಿಸುವವರಿಗೆ ಬಸ್ಸಿನ ವ್ಯವಸ್ಥೆಯಿರುತ್ತದೆ. 2 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದು.

ಶಿಬಿರದಲ್ಲಿ ಜನಪದ ಹಾಡು ಮತ್ತು ಕುಣಿತ, ಸಂಗೀತ, ಯಕ್ಷಗಾನ ಮುಖವರ್ಣಿಕೆ, ಕುಶಲಕರ್ಮಿಗಳ ಜೊತೆ ತರಬೇತಿ, ಗಿಡಮೂಲಿಕೆಗಳ ಪರಿಚಯ, ಎಲೆಗಳಲ್ಲಿ ಕೊಲಾಜ್, ಕೌಶಲ್ಯ ತರಬೇತಿ, ಮನೋರಂಜನಾ ಆಟಗಳು, ಸ್ವರ ವ್ಯಾಯಾಮ, ಕ್ರಿಯೇಟಿವ್ ಆರ್ಟ್, ರಂಗ ವ್ಯಾಯಾಮ, ಮುಖವಾಡ ರಚನೆ, ಅಭಿನಯ ಗೀತೆ, ಕ್ಲೇ ಮೋಡಲ್, ಮೈಮ್, ಮಿಮಿಕ್ರಿ, ಕಥೆ ರಚನೆ, ನಾಟಕ, ವರ್ಲಿ ಕಲೆ, ಹಾಡುಗಳು, ಗೊಂಬೆ ತಯಾರಿಕೆ, ಜಾದೂ, ಪರಿಸರ ವೀಕ್ಷಣೆ ಮತ್ತು ಸಂರಕ್ಷಣೆ, ವಿಜ್ಞಾನ ಕೌತುಕಗಳನ್ನು ಪರಿಚಯಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪಿಲಿಕುಳದ ಆಡಳಿತ ಕಛೇರಿ ಸಂಖ್ಯೆ 0824-2263565, 7892306404 ಅಥವಾ www.pilikula.com ನ್ನು ಸಂಪರ್ಕಿಸಲು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ
ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ
ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
February 28, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror