ಪುಣ್ಚಪ್ಪಾಡಿ ಶಾಲೆಯ ಪುಸ್ತಕ ಜೋಳಿಗೆಗೆ ಬಂತು 15 ಸಾವಿರ ಮೌಲ್ಯದ ಪುಸ್ತಕ…!

May 29, 2019
10:30 PM

ಸವಣೂರು: ಶಾಲಾ ಆರಂಭೋತ್ಸವಕ್ಕೆ ಮಾಡಿದ ಪುಸ್ತಕ ಜೋಳಿಗೆಗೆ ಅನೇಕ ಪುಸ್ತಕಗಳು ಬಂದು ತುಂಬಿದವು.ಸಂಜೆಯ ವೇಳೆ 15 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಬಂದು ತುಂಬಿತು.

Advertisement
Advertisement
Advertisement

ಶಾಲೆಗೆ ಸೇರ್ಪಡೆಗೊಂಡ ಮಕ್ಕಳು ಈ ವಿಶಿಷ್ಟವಾದ ಜೋಳಿಗೆಗೆ ಪುಸ್ತಕವನ್ನು ತುಂಬಿಸಿ, ಪುಸ್ತಕಕ್ಕೆ ನಮಸ್ಕರಿಸಿ ಶಾಲೆಗೆ ಸೇರ್ಪಡೆಗೊಂಡರು. ಮಕ್ಕಳು, ಊರವರು, ಪೋಷಕರು, ಹೆತ್ತವರು ದಾನಿಗಳು, ಪುಸ್ತಕ ಪ್ರಿಯರು ಎಲ್ಲರೂ ಈ ಜೋಳಿಗೆಗೆ ಪುಸ್ತಕ ತುಂಬಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಹೊಸದಾಗಿ ದಾಖಲಾಗುವ ಮಕ್ಕಳನ್ನು ಶಾಲೆಯ ಗೇಟಿನ ಬಳಿಯಿಂದ ಆರತಿ ಬೆಳಗಿ, ಶಾಲೆಯ ಬ್ಯಾಡ್ಜ್ ನೀಡಿ ಶಾಲೆಗೆ ಸ್ವಾಗತಿಸಲಾಯಿತು.

Advertisement

ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ  ಸಾಹಿತಿ  ಪುರಂದರ ಭಟ್ ಬಿ.  ಅಂಕಣಕಾರ, ಹಿರಿಯ ಸಾಹಿತಿ ಪ್ರೊ|ವಿ.ಬಿ. ಅರ್ತಿಕಜೆ, ಕೊಡಂಕಿರಿ ಪ್ರಕಾಶನ ಪುತ್ತೂರಿನ ಪ್ರಕಾಶ್ ಕೊಡಂಕಿರಿ, ಸಾಮಾಜಿಕ ಕಾರ್ಯಕರ್ತ ಲೋಕೇಶ್ ಗೌಡ ಅಲುಂಬುಡ ಮುಂತಾದವರೂ ಈ ಪುಸ್ತಕದ ಜೋಳಿಗೆ ತುಂಬಿಸಿದರು. ಹೀಗೆ ಬರೋಬ್ಬರಿ 15000ಕ್ಕೂ ಅಧಿಕ ಮೌಲ್ಯದ ಪುಸ್ತಕಗಳು ಜೋಳಿಗೆ ತುಂಬಿದವು.

Advertisement

ಕಾರ್ಯಕ್ರಮವನ್ನು ಪುಸ್ತಕ ಜೋಳಿಗೆಗೆ ಮೊದಲ ಪುಸ್ತಕವನ್ನು ತುಂಬುವುದರ ಮೂಲಕ ಉದ್ಘಾಟಿಸಿದ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ  ಮಾತನಾಡಿ ಇಂದು ಸರಕಾರಿ ಶಾಲೆಗಳು ಬಹಳ ಚೆನ್ನಾಗಿ ಕಾರ್ಯನಿರ್ವಹಿಸುತ್ತಿವೆ. ಮಕ್ಕಳಿಗೆ ಎಳವೆಯಿಂದಲೇ ಪುಸ್ತಕ ಪ್ರೀತಿಯನ್ನು ಬೆಳೆಸುವ ಈ ಪ್ರಯತ್ನ ವಿಶಿಷ್ಟ. ಪುಣ್ಚಪ್ಪಾಡಿ ಶಾಲೆಯು ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳಿಂದ ಈಗಾಗಲೇ ಪ್ರಸಿದ್ಧವಾಗಿದೆ. ಎಲ್ಲಾ ಶಾಲೆಗಳಲ್ಲಿ ಈ ರೀತಿಯ ಆರಂಭೋತ್ಸವವಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಉಮಾಶಂಕರ ಗೌಡ ಮಾತನಾಡಿ ಪುಣ್ಚಪ್ಪಾಡಿ ಶಾಲೆಯು ಕಳೆದ ಮೂರು ವರ್ಷಗಳಿಂದ ಶಾಲಾ ಆರಂಭೋತ್ಸವವನ್ನು ವಿಶಿಷ್ಟವಾಗಿ ಆಚರಿಸುತ್ತಾ ಬರುತ್ತಿದೆ. ಈ ವರ್ಷದ ಈ ಪುಸ್ತಕ ಜೋಳಿಗೆ ನಿಜಕ್ಕೂ ಅರ್ಥಪೂರ್ಣವಾದ ಆರಂಭೋತ್ಸವ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಯತೀಶ್ ಕುಮಾರ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಗಾಯತ್ರಿ ಓಂತಿಮನೆ, ಎಸ್.ಡಿ.ಎಮ್.ಸಿ.ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಊರವರು ಭಾಗವಹಿಸಿದ್ದರು. ಪದವೀಧರ ಶಿಕ್ಷಕರಾದ ಶೋಭಾ ಕೆ. ಸ್ವಾಗತಿಸಿ ಫ್ಲಾವಿಯಾ ವಂದಿಸಿದರು. ಮುಖ್ಯಗುರು ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ
ಕಾಳಸರ್ಪ ‘ಯೋಗಾಯೋಗ : ಜ್ಯೋತಿಷ್ಯ ಶಾಸ್ತ್ರ, ಮನೋವಿಜ್ಞಾನಿಗಳು ಹೇಳುವುದು ಒಂದೇ : ಭಯಪೀಡಿತರಾಗ ಬೇಡಿ
March 18, 2024
12:12 PM
by: The Rural Mirror ಸುದ್ದಿಜಾಲ
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯ್ಕೆ ಗೊಂದಲ | ಪಂಜ ಸೇರಿದಂತೆ ದಕ ಜಿಲ್ಲೆಯ ಮೂರು ದೇವಸ್ಥಾನಗಳ ಆಯ್ಕೆಗೆ ತಾತ್ಕಾಲಿಕ ತಡೆ |
March 17, 2024
10:43 AM
by: ದ ರೂರಲ್ ಮಿರರ್.ಕಾಂ
ಇಂದು ರಾಷ್ಟ್ರೀಯ ಪಕ್ಷಿ ದಿನ ಹಾಗೂ ಪಕ್ಷಿತಜ್ಞ ಸಲೀಂ ಅಲಿ ಯವರ ಜನ್ಮದಿನ
November 12, 2023
3:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror