ಪುತ್ತೂರು ಎಪಿಎಂಸಿ ರೈಲ್ವೇ ಅಂಡರ್‌ಪಾಸ್ ಕಾಮಗಾರಿಗೆ ಮೂಲ ಸೌಕರ್ಯ ನಿಧಿಯಿಂದ ಅನುದಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆಗೆ ಮನವಿ

August 29, 2019
1:00 PM

ಸವಣೂರು : ಎಪಿಎಂಸಿ ರೈಲ್ವೇ ಅಂಡರ್‌ಪಾಸ್ ಕಾಮಗಾರಿಗೆ ಮೂಲ ಸೌಕರ್ಯ ನಿಽಯಿಂದ ಅನುದಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಚಾರ್ವಾಕದ ಅವರ ಮನೆಯಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮನವಿ ಸಲ್ಲಿಸಿದರು.

Advertisement
Advertisement

ಪುತ್ತೂರು ಎಪಿಎಂಸಿ ರಸ್ತೆಯಲ್ಲಿ ರೈಲ್ವೇ ಅಂಡರ್‌ಪಾಸ್ ನಿರ್ಮಾಣಕ್ಕೆ ಈಗಾಗಲೇ 12.70 ಕೋಟಿಯ ಕ್ರಿಯಾಯೋಜನೆ ತಯಾರಿಸಲಾಗಿದ್ದು, ರೈಲ್ವೇ ಇಲಾಖೆ ಹಾಗೂ ಎಪಿಎಂಸಿ 50:50 ಯಂತೆ ಅನುದಾನ ಭರಿಸುವ ಕುರಿತು ಈಗಾಗಲೇ ಅಂದಾಜು ಪಟ್ಟಿ ಮಾಡಲಾಗಿದೆ. ಇದರಿಂದಾಗಿ ರೈಲ್ವೇ ಇಲಾಖೆ 6.35 ಕೋಟಿ ವೆಚ್ಚ ನೀಡಲಿದ್ದು,ಉಳಿದ 6.35 ಕೋಟಿ ರೂಗಳನ್ನು ಎಪಿಎಂಸಿ ಭರಿಸಬೇಕಾಗಿದೆ. ಈ ಕುರಿತು ಈಗಾಗಲೇ ಎಪಿಎಂಸಿ ವತಿಯಿಂದ ಪುತ್ತೂರು ನಗರ ಸಭೆ ,ಶಾಸಕರಿಗೆ,ಸಂಸದರಿಗೆ ಮನವಿ ಮಾಡಲಾಗಿದೆ.ಇದಕ್ಕಾಗಿ ಸರಕಾರದ ಮೂಲ ಸೌಕರ್ಯ ನಿಧಿಯಿಂದ ರೂ 5 ಕೋಟಿ ಅನುದಾನ ನೀಡುವಂತೆ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದರು.

ಅಲ್ಲದೆ ಕಾಮಗಾರಿ ತ್ವರಿತವಾಗಿ ಆರಂಭಿಸಲು ರೈಲ್ವೇ ಇಲಾಖೆಯ ಡಿ.ಆರ್.ಎಂ ಅಪರ್ಣಾ ಗಾರ್ಗ್ ಅವರಿಗೆ ಶೋಭಾ ಕರಂದ್ಲಾಜೆ ಅವರು ದೂರವಾಣಿ ಮೂಲಕ ತಿಳಿಸಿದರು.

ಮರಳು ಸಮಸ್ಯೆ ಪರಿಹಾರಕ್ಕೆ ಸಭೆ:  ಅಲ್ಲದೆ ಸರಕಾರದ ಮರಳು ನೀತಿಯಿಂದ ಜನತೆಗೆ ಸಮಸ್ಯೆಯಾಗಿದೆ.ಮನೆ ಹಾಗೂ ಯಾವುದೇ ಕಾಮಗಾರಿ ನಡೆಸಲು ಸಾಧ್ಯವಾಗದ ಸ್ಥಿತಿ ಇದೆ. ನಾನ್ ಸಿಆರ್‌ಝೆಡ್ ನವರಿಗೂ ಮರಳು ತೆಗೆಯಲು ಅವಕಾಶ ನೀಡುವ ಕುರಿತು ಸಚಿವರೊಂದಿಗೆ ಸಭೆ ನಡೆಸುವಂತೆಯೂ ಸಂಸದರಿಗೆ ದಿನೇಶ್ ಮೆದು ಮನವಿಮಾಡಿದರು.

ಪ್ರತಿಕ್ರಿಯೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ದ.ಕ.ಸಂಸದ ನಳಿನ್ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಜತೆಗೂಡಿ ಮುಖ್ಯಮಂತ್ರಿ ಹಾಗೂ ಗಣಿ,ಭೂ ವಿಜ್ಞಾನ ಇಲಾಖೆಯ ಸಚಿವರ ಜತೆ ಸಭೆ ನಡೆಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು .ಮರಳು ಸಮಸ್ಯೆ ಸರಪಡಿಸಲು ಶ್ರಮಿಸಲಾಗುವುದು ಎಂದರು.

ಈ ಸಂದರ್ಭ ಸವಣೂರು ಗ್ರಾ.ಪಂ.ಸದಸ್ಯ ಪ್ರಕಾಶ್ ಕುದ್ಮನಮಜಲು, ಸ್ಥಳೀಯರಾದ ತೀರ್ಥರಾಮ ಕೆಡೆಂಜಿ,ಬೆಳಿಯಪ್ಪ ಗೌಡ ಚೌಕಿಮಠ ಹಾಜರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror