ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ: ಕರೆಮುಹೂರ್ತ

December 6, 2019
3:04 PM

ಪುತ್ತೂರು: ಮಹಾತೋಬಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯುವ 27 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿಯಾಗಿ ಕರೆಮುಹೂರ್ತವನ್ನು ಕಂಬಳ ಸಮಿತಿಯ ಸಂಚಾಲಕರಾದ ಮಹಾಲಿಂಗೇಶ್ವರ ದೇವಾಲಯದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್.ಸುಧಾಕರ ಶೆಟ್ಟಿಯವರು ನೆರವೇರಿಸಿದರು.

ಬಳಿಕ ಮಾತನಾಡಿದ ಸುಧಾಕರ ಶೆಟ್ಟಿಯವರು ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಕೋಟಿ ಚೆನ್ನಯ ಕಂಬಳವು ಬಾರಿ ಅದ್ದೂರಿಯಾಗಿ ಮತ್ತು ಶಿಸ್ತುಬದ್ದವಾಗಿ ನೆರವೆರುತ್ತಾ ಬಂದಿದ್ದು, ಅಂತೆಯೇ ಈ ಬಾರಿಯೂ ದೈವದೇವರ ಅನುಗ್ರಹದಿಂದ ಅತ್ಯಂತ ವೈಭವಪೂರ್ವಕವಾಗಿ ನೆರವೇರಲಿದೆ ಎಂದರು.

 

ಕರೆಮುಹೂರ್ತಕ್ಕೂ ಮುನ್ನ ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ಮೂಲ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ, ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಸಮಿತಿಯ ಪದಾಧಿಕಾರಿಗಳಾದ ಸುದೇಶ್ ಕುಮಾರ್ ಚಿಕ್ಕಪುತ್ತೂರು, ರೋಶನ್ ರೈ ಬನ್ನೂರು, ಸುದೀರ್ ಶೆಟ್ಟಿ ನೆಹರು ನಗರ, ಉಮೇಶ್ ಕರ್ಕೇರಾ, ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...