ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ: ಕರೆಮುಹೂರ್ತ

December 6, 2019
3:04 PM

ಪುತ್ತೂರು: ಮಹಾತೋಬಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯುವ 27 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿಯಾಗಿ ಕರೆಮುಹೂರ್ತವನ್ನು ಕಂಬಳ ಸಮಿತಿಯ ಸಂಚಾಲಕರಾದ ಮಹಾಲಿಂಗೇಶ್ವರ ದೇವಾಲಯದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್.ಸುಧಾಕರ ಶೆಟ್ಟಿಯವರು ನೆರವೇರಿಸಿದರು.

ಬಳಿಕ ಮಾತನಾಡಿದ ಸುಧಾಕರ ಶೆಟ್ಟಿಯವರು ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಕೋಟಿ ಚೆನ್ನಯ ಕಂಬಳವು ಬಾರಿ ಅದ್ದೂರಿಯಾಗಿ ಮತ್ತು ಶಿಸ್ತುಬದ್ದವಾಗಿ ನೆರವೆರುತ್ತಾ ಬಂದಿದ್ದು, ಅಂತೆಯೇ ಈ ಬಾರಿಯೂ ದೈವದೇವರ ಅನುಗ್ರಹದಿಂದ ಅತ್ಯಂತ ವೈಭವಪೂರ್ವಕವಾಗಿ ನೆರವೇರಲಿದೆ ಎಂದರು.

 

ಕರೆಮುಹೂರ್ತಕ್ಕೂ ಮುನ್ನ ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ಮೂಲ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ, ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಸಮಿತಿಯ ಪದಾಧಿಕಾರಿಗಳಾದ ಸುದೇಶ್ ಕುಮಾರ್ ಚಿಕ್ಕಪುತ್ತೂರು, ರೋಶನ್ ರೈ ಬನ್ನೂರು, ಸುದೀರ್ ಶೆಟ್ಟಿ ನೆಹರು ನಗರ, ಉಮೇಶ್ ಕರ್ಕೇರಾ, ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror