ಪುತ್ತೂರು ‘ಗೋಪಣ್ಣ’ ನೆನಪಿನ ಗೌರವಕ್ಕೆ ಪಾವಲಕೋಡಿ ಗಣಪತಿ ಭಟ್ ಆಯ್ಕೆ

June 26, 2019
2:47 PM

ಪುತ್ತೂರು: ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸಂಸ್ಮರಣೆ ಕಾರ್ಯಕ್ರಮವು 2019 ಜೂನ್ 30 ರವಿವಾರದಂದು ಅಪರಾಹ್ನ ಗಂಟೆ 2ಕ್ಕೆ ಜರುಗಲಿದೆ.

ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ಗೃಹದಲ್ಲಿ ಸಂಪನ್ನವಾಗುವ ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಅರ್ಥದಾರಿ, ನಿವೃತ್ತ ಅಧ್ಯಾಪಕ ಪಾವಲಕೋಡಿ ಗಣಪತಿ ಭಟ್ಟರಿಗೆ ‘ಗೋಪಣ್ಣ ನೆನಪಿನ ಗೌರವ’ ಪ್ರಧಾನ ಮಾಡಲಾಗುವುದು. ಸಮಾರಂಭದ ಬಳಿಕ ತಾಳಮದ್ದಳೆ ನಡೆಯಲಿದೆ.
ಪಾವಲಕೋಡಿ ಗಣಪತಿ ಭಟ್ಟರು ನಿವೃತ್ತ ಅಧ್ಯಾಪಕರು. ಕನ್ಯಾನ, ಉಪ್ಪಿನಂಗಡಿ, ನೆಲ್ಲಿಕಟ್ಟೆ ಶಾಲೆ ಮತ್ತು ಕಾಣಿಯೂರು ಜ್ಯೂನಿಯರ್ ಕಾಲೇಜುಗಳಲ್ಲಿ ಶಿಕ್ಷಕ ವೃತ್ತಿ. ಶಿಸ್ತಿನ ಅಧ್ಯಾಪಕನೆನ್ನುವ ನೆಗಳ್ತೆ. ಶಿಕ್ಷೆಯೂ ಶಿಕ್ಷಣವೂ ಜತೆಜತೆಯಲ್ಲಿರುವಾಗ ರೂಪುಗೊಂಡ ವಿದ್ಯಾರ್ಥಿ ಸಮೂಹ ಪಾವಲಕೋಡಿಯವರನ್ನು ಈಗಲೂ ಗೌರವಿಸುತ್ತಾರೆ.

ಇವರು ಯಕ್ಷಗಾನ ಅರ್ಥದಾರಿ, ವೇಷಧಾರಿ. ಪುತ್ತೂರು ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಲ್ಲಿ ಬಹುಕಾಲ ಸಕ್ರಿಯರು. ಬಹುತೇಕ ಖಳಪಾತ್ರಗಳ ಸುಲಲಿತ ನಿರ್ವಹಣೆ. ಶುಂಭ, ಚಂಡ-ಮುಂಡ, ಯಮ, ಕಂಸ, ವೀರಭದ್ರ.. ಮೊದಲಾದ ಪಾತ್ರಗಳ ಸ್ವ-ನಿರ್ಮಿತ ವಿನ್ಯಾಸ. ನಿಯಮಿತವಾದ ಓದುವಿಕೆ. ಒಂದು ಕಾಲಘಟ್ಟದ ಯಕ್ಷಬದುಕಿಗೆ ಪಾವಲಕೋಡಿ ಗಣಪತಿ ಭಟ್ಟರು ಇತಿಹಾಸವಾಗಿ ನಮ್ಮೊಡನಿದ್ದಾರೆ. ಅವರ ದೀರ್ಘ ಕಲಾಯಾನಕ್ಕೆ ಈಗ ಪುತ್ತೂರು ಗೋಪಣ್ಣ ನೆನಪಿನ ಗೌರವ.

ಕಳೆದ ವರುಷಗಳಲ್ಲಿ ಗೋಪಣ್ಣ ನೆನಪಿನ ಗೌರವವನ್ನು ದೇವದರ್ಜಿ ಅಳಕೆ ನಾರಾಯಣ ರಾವ್, ಮದ್ಲೆಗಾರ ವೆಂಕಟೇಶ ಉಳಿತ್ತಾಯರು, ಜ್ಯೋತಿಷಿ ಗಣಪತಿ ಭಟ್ಟರಿಗೆ ಪ್ರದಾನ ಮಾಡಲಾಗಿತ್ತು. ಗೋಪಣ್ಣ ಅವರ ಚಿರಂಜೀವಿ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಕುಟುಂಬ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror