ಪ್ರಗತಿಪರ ಕೃಷಿಕ ಮರಿಕೆ ಎ.ಪಿ ರಮಾನಾಥ್ ರಾವ್ ನಿಧನ

May 16, 2019
9:04 PM

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಬಳಿಯ ನಿವಾಸಿ ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಮರಿಕೆ ಎ.ಪಿ ರಮಾನಾಥ ರಾವ್ (82) ಗುರುವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.

Advertisement
Advertisement
Advertisement

ಸಂಟ್ಯಾರ್ ಬಳಿ ಕೃಷಿ, ಹೈನುಗಾರಿಕೆ ಯಲ್ಲಿ ವಿಶೇಷ ಸಾಧನೆಗೈದ ಇವರು ಪುತ್ತೂರು ಏಳ್ಮುಡಿಯ ಹಾಲು ಉತ್ಪಾದಕರ ಸಂಘದ ಸ್ಥಾಪನೆಗೆ ಕಾರಣಕರ್ತರಾಗಿದ್ದರು. ಶತಮಾನ ಕಂಡ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ಶತಮಾನೋತ್ಸವದಲ್ಲೂ ಸಕ್ರಿಯವಾಗಿ ಪಾಲ್ಗೊಂಡ ಇವರು, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ, ಸಂಟ್ಯಾರ್ ಸಾರ್ವಜನಿಕ ಗಣೇಶೋತ್ಸವದಲ್ಲಿ ಗೌರವಾಧ್ಯಕ್ಷರಾಗಿ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾಗಿ, ಹಂಟ್ಯಾರ್ ಶಾಲಾ ಹಳೆವಿದ್ಯಾರ್ಥಿ ಸಂಘದ ಪ್ರಮುಖರಾಗಿ ಗುರುತಿಸಿಕೊಂಡಿದ್ದರು.  ಕಾರ್ಪಾಡಿ ದೇವಳದ ಜಾತ್ರೆಯ ಸಾರ್ವಜನಿಕ ಅನ್ನಸಂತರ್ಪಣೆಯ ಸೇವಾಕರ್ತರಾಗಿ, ಹಂಟ್ಯಾರ್ ಶಾಲಾ ಅಭಿವೃದ್ಧಿ ಸಮಿತಿಯ ದಾನಿಗಳಾಗಿ ಗುರುತಿಸಿಕೊಂಡಿದ್ದರು.

Advertisement

ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ನಡೆಯಲಿದೆ .

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮರಳಿ ಬಾರದೂರಿಗೆ ಹೋದ ನಟ ವಿಜಯ್ ರಾಘವೇಂದ್ರ ಪತ್ನಿ | ಸ್ಪಂದನಾ ಹೃದಯಾಘಾತದಿಂದ ನಿಧನ |
August 7, 2023
12:55 PM
by: The Rural Mirror ಸುದ್ದಿಜಾಲ
#HeartAttack | ಹೃದಯಾಘಾತದಿಂದ ಯುವಕ ಮೃತ್ಯು |
June 26, 2023
10:30 AM
by: ದ ರೂರಲ್ ಮಿರರ್.ಕಾಂ
ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್ ಸುಭಾಶ್ಚಂದ್ರ ನಿಧನ
May 31, 2023
10:15 AM
by: ಮಿರರ್‌ ಡೆಸ್ಕ್
ಇಹಲೋಕ ತ್ಯಜಿಸಿದ ಜನಪ್ರಿಯ ನಟ ಶರತ್ ಬಾಬು
May 22, 2023
4:14 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror