ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಬಳಿಯ ನಿವಾಸಿ ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಮರಿಕೆ ಎ.ಪಿ ರಮಾನಾಥ ರಾವ್ (82) ಗುರುವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಸಂಟ್ಯಾರ್ ಬಳಿ ಕೃಷಿ, ಹೈನುಗಾರಿಕೆ ಯಲ್ಲಿ ವಿಶೇಷ ಸಾಧನೆಗೈದ ಇವರು ಪುತ್ತೂರು ಏಳ್ಮುಡಿಯ ಹಾಲು ಉತ್ಪಾದಕರ ಸಂಘದ ಸ್ಥಾಪನೆಗೆ ಕಾರಣಕರ್ತರಾಗಿದ್ದರು. ಶತಮಾನ ಕಂಡ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ಶತಮಾನೋತ್ಸವದಲ್ಲೂ ಸಕ್ರಿಯವಾಗಿ ಪಾಲ್ಗೊಂಡ ಇವರು, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ, ಸಂಟ್ಯಾರ್ ಸಾರ್ವಜನಿಕ ಗಣೇಶೋತ್ಸವದಲ್ಲಿ ಗೌರವಾಧ್ಯಕ್ಷರಾಗಿ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾಗಿ, ಹಂಟ್ಯಾರ್ ಶಾಲಾ ಹಳೆವಿದ್ಯಾರ್ಥಿ ಸಂಘದ ಪ್ರಮುಖರಾಗಿ ಗುರುತಿಸಿಕೊಂಡಿದ್ದರು. ಕಾರ್ಪಾಡಿ ದೇವಳದ ಜಾತ್ರೆಯ ಸಾರ್ವಜನಿಕ ಅನ್ನಸಂತರ್ಪಣೆಯ ಸೇವಾಕರ್ತರಾಗಿ, ಹಂಟ್ಯಾರ್ ಶಾಲಾ ಅಭಿವೃದ್ಧಿ ಸಮಿತಿಯ ದಾನಿಗಳಾಗಿ ಗುರುತಿಸಿಕೊಂಡಿದ್ದರು.
ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ನಡೆಯಲಿದೆ .

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಪ್ರಗತಿಪರ ಕೃಷಿಕ ಮರಿಕೆ ಎ.ಪಿ ರಮಾನಾಥ್ ರಾವ್ ನಿಧನ"