ಪ್ರತಿಭಟನಾ ಸಭೆಯಲ್ಲಿ ಸೈನಿಕರಿಗೆ ಅವಮಾನ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು – ಎಸ್ ಡಿ ಪಿ ಐ

September 21, 2019
6:12 PM

ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ಮತ್ತು ರಾಜ್ಯ ಸರಕಾರದ ನಿಷ್ಕ್ರಿಯತೆಯ ಬಗ್ಗೆ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲಾಗಿದ್ದು ಈ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುವಾಗ ಸೈನಿಕರನ್ನು ಅವಮಾನಿಸಲಾಗಿದೆ ಎಂದು ಸತ್ಯಕ್ಕೆ ದೂರವಾದದ್ದು ಎಂದು ಎಸ್ ಡಿ ಪಿ ಐ ಸ್ಪಷ್ಟನೆ ನೀಡಿದೆ.

ಕೇಂದ್ರ ಸರಕಾರ ಕಾಶ್ಮೀರದ ವಿಶೇಷ  ಸ್ಥಾನಮಾನವನ್ನು ಕಸಿದುಕೊಂಡ ನಂತರ ಕಾಶ್ಮೀರದಲ್ಲಿ ಉಂಟಾದ ಭಯದ ವಾತಾವರಣವನ್ನು ಮತ್ತು ದೇಶದ ಪ್ರಸಕ್ತ ಸನ್ನಿವೇಶವನ್ನು ವಿವರಿಸಲಾಗಿದೆಯೇ ಹೊರತು ಸೈನಿಕರಿಗೆ ಅವಮಾನ ಮಾಡುವಂತಹ ಯಾವುದೇ ವಿಚಾರಗಳನ್ನು ಉಲ್ಲೇಖಿಸಲಾಗಿಲ್ಲ. ಅದಲ್ಲದೇ ಪ್ರತಿಭಟನೆಯ ಮರುದಿನದ ಬಹುತೇಕ ಮಾಧ್ಯಮ ಗಳಲ್ಲಿಯು ಸ್ಪಷ್ಟವಾದ ವರದಿಗಳೇ ಪ್ರಕಟವಾಗಿದೆ. ಎಸ್ ಡಿ ಪಿ ಐ ಯಾವತ್ತೂ ಕೂಡ ಸಂಘಪರಿವಾರದ ರೀತಿಯಲ್ಲಿ ಸೈನಿಕರನ್ನು ಎಳೆದು ತಂದು ಆ ಮೂಲಕ ರಾಜಕೀಯ ಮಾಡುವ ಪಕ್ಷವಲ್ಲ. ನಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಿಕೊಂಡು ಜನವಿರೋಧಿ ನೀತಿಯ ಬಗ್ಗೆ ಮಾತನಾಡುವ ಧ್ವನಿಯನ್ನು ಅಡಗಿಸಲು ಖಂಡಿತವಾಗಿಯು ಸಾಧ್ಯವಿಲ್ಲ ಹಾಗೂ ಸುಳ್ಳು ವರದಿಯನ್ನು ಪ್ರಕಟಿಸಿದವರ ವಿರುದ್ಧ  ಮುಂದಿನ ದಿನಗಳಲ್ಲಿ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ಕೆ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror