ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಿರಿಯರು, ಪ್ರಮುಖ ಬಿಜೆಪಿ ಮುಖಂಡರು ಗೈರು : ಆಕಾಂಕ್ಷಿಗಳಲ್ಲಿ ಹೆಚ್ಚಿದ ಅಸಮಾಧಾನ

August 20, 2019
12:18 PM

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಪಕ್ಷ ನಿಷ್ಠರು, ಹಿರಿಯರನ್ನು ಕಡೆಗಣಿಸಲಾಗಿದೆ ಎಂಬ ಆಕ್ಷೇಪ ಕೇಳಿಬರುತ್ತಿದೆ.

ಈ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸುಳ್ಯ ಶಾಸಕ ಎಸ್.ಅಂಗಾರ, ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಜಿ.ಎಚ್.ತಿಪ್ಪಾರೆಡ್ಡಿ ಸೇರಿದಂತೆ ಹಲವು ಹಿರಿಯ ಮತ್ತು ಪ್ರಮುಖ ಬಿಜೆಪಿ ನಾಯಕರು ಗೈರುಹಾಜರಾಗಿದ್ದರು.

ರಾಜುಗೌಡ, ಪ್ರಭು ಪಾಟೀಲ್ ಸೇರಿದಂತೆ ಹತ್ತು ಹೆಚ್ಚು ಮಂದಿ ಸಚಿವ ಆಕಾಂಕ್ಷಿ ಶಾಸಕರು ಹಾಗೂ ಮುಖಂಡರು ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದು ತನ್ನ ಕ್ಷೇತ್ರದ ಜನತೆಗೆ ಮಾಡಿರುವ ಅನ್ಯಾಯ ಎಂದು ಶಾಸಕ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ.

ಈ ಮಧ್ಯೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಶಾಸಕ ಎಸ್.ಅಂಗಾರ, ಬಾಲಚಂದ್ರ ಜಾರಕಿಹೊಳಿ, ರಾಜುಗೌಡ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವು ಸ್ಥಾನಕಾಂಕ್ಷಿ ಶಾಸಕರ ಗೈರುಹಾಜರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎದ್ದು ಕಾಣುತ್ತಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror