ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಿರಿಯರು, ಪ್ರಮುಖ ಬಿಜೆಪಿ ಮುಖಂಡರು ಗೈರು : ಆಕಾಂಕ್ಷಿಗಳಲ್ಲಿ ಹೆಚ್ಚಿದ ಅಸಮಾಧಾನ

August 20, 2019
12:18 PM

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಪಕ್ಷ ನಿಷ್ಠರು, ಹಿರಿಯರನ್ನು ಕಡೆಗಣಿಸಲಾಗಿದೆ ಎಂಬ ಆಕ್ಷೇಪ ಕೇಳಿಬರುತ್ತಿದೆ.

ಈ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸುಳ್ಯ ಶಾಸಕ ಎಸ್.ಅಂಗಾರ, ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಜಿ.ಎಚ್.ತಿಪ್ಪಾರೆಡ್ಡಿ ಸೇರಿದಂತೆ ಹಲವು ಹಿರಿಯ ಮತ್ತು ಪ್ರಮುಖ ಬಿಜೆಪಿ ನಾಯಕರು ಗೈರುಹಾಜರಾಗಿದ್ದರು.

ರಾಜುಗೌಡ, ಪ್ರಭು ಪಾಟೀಲ್ ಸೇರಿದಂತೆ ಹತ್ತು ಹೆಚ್ಚು ಮಂದಿ ಸಚಿವ ಆಕಾಂಕ್ಷಿ ಶಾಸಕರು ಹಾಗೂ ಮುಖಂಡರು ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದು ತನ್ನ ಕ್ಷೇತ್ರದ ಜನತೆಗೆ ಮಾಡಿರುವ ಅನ್ಯಾಯ ಎಂದು ಶಾಸಕ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ.

ಈ ಮಧ್ಯೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಶಾಸಕ ಎಸ್.ಅಂಗಾರ, ಬಾಲಚಂದ್ರ ಜಾರಕಿಹೊಳಿ, ರಾಜುಗೌಡ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವು ಸ್ಥಾನಕಾಂಕ್ಷಿ ಶಾಸಕರ ಗೈರುಹಾಜರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎದ್ದು ಕಾಣುತ್ತಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror