ಬಂಟ್ವಾಳ ಕೊರೊನಾ ಸೋಂಕಿನಿಂದ ಮೃತಪಟ್ಟ ಮಹಿಳೆಗೆ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಪ್ರಕರಣ ದಾಖಲು

April 20, 2020
9:01 PM

ಬಂಟ್ವಾಳ:ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಮಹಿಳೆಯೊಬ್ಬರು ಕೋವಿಡ್ -19 ಕೋರೋನ ಸೊಂಕು ಖಾಯಿಲೆಯಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಮೃತಪಟ್ಟ ಮಹಿಳೆಗೆ ಬಂಟ್ವಾಳದಲ್ಲಿ  ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಕೇಸು ದಾಖಲಾಗಿದೆ.

ಮೃತರ ಗಂಡ ಮತ್ತು ಮಗ  ನೀಡಿದ ಮಾಹಿತಿಯಂತೆ,  ಮೃತ ಮಹಿಳೆ  ನ್ಯುಮೋನಿಯ (ಶ್ವಾಸಕೋಶದ) ಖಾಯಿಲೆಯಿಂದ ಬಳಲುತ್ತಿದ್ದು. ಅವರಿಗೆ ಅನೇಕ ಕಡೆ ಚಿಕಿತ್ಸೆ ಕೊಡಿಸಿದರು  ಖಾಯಿಲೆಯಿಂದ ಗುಣ ಮುಖವಾಗದೆ ಇತ್ತು. ಈಚೆಗೆ ಬಳಲುತ್ತಿದ್ದ ಅವರನ್ನು ಎ.15 ರಂದು ಚಿಕಿತ್ಸೆಗಾಗಿ ಬಂಟ್ವಾಳದ ಖಾಸಗಿ ಕ್ಲಿನಿಕ್ ಗೆ ಕರೆದೊಯ್ಯಲಾಗಿತ್ತು. ಆದರೆ ಆ ವೈದ್ಯರು ಕೆ.ಪಿ.ಎಂ.ಇ ಕಾಯ್ದೆ ಪ್ರಕಾರ ಎಲ್ಲಾ ಸಾಂಕ್ರಾಮಿಕ ಖಾಯಿಲೆಗಳನ್ನು ಸಂಬಂಧಪಟ್ಟ ಆರೋಗ್ಯ ಇಲಾಖೆಗೆ ನೀಡಬೇಕಾಗಿದ್ದು. ನಾಲ್ಕು ದಿನಗಳ ಚಿಕಿತ್ಸೆಯನ್ನು ನೀಡಿ ರೋಗ ಉಲ್ಬಣಗೊಂಡರು ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆ ಆಸ್ಪತ್ರೆಗೆ ನಿರ್ದೆಶನವನ್ನು ವೈದ್ಯರು ನೀಡಿರುವುದಿಲ್ಲ, ಆರೋಗ್ಯ ಇಲಾಖೆಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸಿರುತ್ತಾರೆ ಈ ಕಾರಣದಿಂದ ತಾಲೂಕು ಆರೋಗ್ಯಾಧಿಕಾರಿಗಳು  ನೀಡಿದ ದೂರಿನಂತೆ  ಪ್ರಕರಣ ದಾಖಲಾಗಿರುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ
July 7, 2026
12:25 PM
by: ಸಾಯಿಶೇಖರ್ ಕರಿಕಳ
ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ
July 7, 2026
11:57 AM
by: ಮಹೇಶ್ ಪುಚ್ಚಪ್ಪಾಡಿ
ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror