ಬಂಡಾಯದ ವಿರುದ್ಧ ಬಿಜೆಪಿ ಅಧ್ಯಕ್ಷರ ಟಾಂಗ್ !

May 31, 2019
10:45 PM

ಸುಳ್ಯ: ನಗರ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆ ಪಕ್ಷದಲ್ಲಿ ಬಂಡಾಯದ ಮತ್ತು ಅಸಮಾಧಾನದ ಹೊಗೆಯೆಬ್ಬಿಸಿದ್ದವರಿಗೆ ಬಿಜೆಪಿ ಅಧ್ಯಕ್ಷರು ಎಚ್ಚರಿಕೆಯ ಟಾಂಗ್ ನೀಡಿದ್ದಾರೆ. ನಗರ ಪಂಚಾಯತ್ ಚುನಾವಣೆಯಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದಾಗ ಬಿಜೆಪಿಯ ಕೆಲವು ಮುಖಂಡರಿಂದ ಮತ್ತು ಟಿಕೆಟ್ ಆಕಾಂಕ್ಷಿಗಳಿಂದ ಅಸಮಾಧಾನ, ಆಕ್ರೋಶ ವ್ಯಕ್ತವಾಗಿತ್ತು. ಬಂಡಾಯವಾಗಿ ಅಭ್ಯರ್ಥಿಗಳನ್ನು ಕಣಕ್ಕೂ ಇಳಿಸಿದ್ದರು. ಚುನಾವಣಾ ಫಲಿತಾಂಶ ಬಂದ ಬಳಿಕ ಇದರ ವಿರುದ್ಧ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ ಸ್ಟ್ರಾಂಗ್ ಆಗಿಯೇ ಟಾಂಗ್ ನೀಡಿದ್ದಾರೆ.

ಹಲವು ವರ್ಷ ಅಧಿಕಾರವನ್ನು ಅನುಭವಿಸಿದವರೇ ಹೊಸಬರಿಗೆ ಅವಕಾಶ ನೀಡುವ ಪಕ್ಷದ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಭ್ಯರ್ಥಿ ಆಯ್ಕೆಯ ಸಂದರ್ಭದಲ್ಲಿ ಕೆಲವು ‌ನಾಯಕರು ತಳೆದ ನಿಲುವು ಅವರ ಮಾತುಗಳು ತೀವ್ರ ನೋವು ತಂದಿತ್ತು. ನಾವು ಯಾರು ಕೂಡ ವೈಯುಕ್ತಿಕ ಹಿತಾಸಕ್ತಿಯಿಂದ ಕೆಲಸ ಮಾಡುತ್ತಿಲ್ಲ. ಎಲ್ಲರೂ ಪಕ್ಷಕ್ಕಾಗಿ, ಸಂಘಟನೆಗಾಗಿ ಕೆಲಸ ಮಾಡುತ್ತೇವೆ. ಪಕ್ಷದ ತೀರ್ಮಾನ ಸರಿಯಾಗಿತ್ತು ಎಂಬುದಕ್ಕೆ ಮತದಾರರ ತೀರ್ಪೇ ಸಾಕ್ಷಿ ಎಂದು ಬಿಜೆಪಿ ವಿಜಯೋತ್ಸವದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ವಳಲಂಬೆ ಹೇಳಿದರು. ಪಕ್ಷದೊಳಗಿನ ಬಂಡಾಯದ ಮತ್ತು ಅಸಮಾಧಾನದ ವಿರುದ್ಧ ಇದೇ ಪ್ರಥಮವಾಗಿ ಖಡಕ್ಕಾಗಿ ಧ್ವನಿ ಎತ್ತಿದ ಬಿಜೆಪಿ ಅಧ್ಯಕ್ಷರ ಮಾತಿಗೆ ಕಾರ್ಯಕರ್ತರು ಚಪ್ಪಾಳೆಯ ಮೂಲಕ ಸಾಥ್ ನೀಡಿದರು.

ಎರಡು ಸ್ಥಾನ ಕಡಿಮೆಯಾಗಲು ಅಸಮಾಧಾನ ಕಾರಣವೇ.‌?

ನಗರ ಪಂಚಾಯತ್ ಚುನಾವಣೆಯಲ್ಲಿ 16 ಸ್ಥಾನ ಗೆಲ್ಲುವುದು ಖಚಿತ ಎಂದು ಬಿಜೆಪಿ ಅಧ್ಯಕ್ಷರು ಸೇರಿದಂತೆ ಎಲ್ಲಾ ನಾಯಕರೂ ಹೇಳಿದ್ದರು. ಆದರೆ ಫಲಿತಾಂಶ ಬಂದಾಗ ಎರಡು ಸ್ಥಾನ ಕಡಿಮೆಯಾಗಿ 16 ಸ್ಥಾನ ಬಂದಿತ್ತು. ಮೂರನೇ ವಾರ್ಡ್ ಜಯನಗರ ಸೇರಿದಂತೆ ಗೆಲುವು ನಿಶ್ಚಿತ ಎಂದು ಹೇಳಲಾಗಿದ್ದ ಒಂದೆರಡು ವಾರ್ಡ್ ಗಳಲ್ಲಿ ಬಿಜೆಪಿ ಸೋಲಲು ಅಸಮಾಧಾನ ಕಾರಣವೇ ಎಂಬ ಮಾತುಗಳು ಕೇಳಿ ಬರುತಿದೆ‌. ಆದರೆ ಬಂಡಾಯದ ಬಿಸಿ ತಟ್ಟಿದ್ದ ಕೆಲವು ವಾರ್ಡ್ ಗಳಲ್ಲಿ ಅದನ್ನು ಮೀರಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದೂ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror