ಬದಿಯಡ್ಕ ಮತ್ತು ಕಾಞಂಗಾಡ್ ಕ್ಯಾಂಪ್ಕೊ ಶಾಖೆಗಳಲ್ಲಿ ಅಡಿಕೆ ಖರೀದಿಸಲು ನಿರ್ಧಾರ

April 14, 2020
5:45 PM

ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಅಡಿಕೆ ಖರೀದಿ ನಡೆಸಲು ಕ್ಯಾಂಪ್ಕೋ ಮುಂದಾಗಿದೆ. ಜಿಲ್ಲಾಧಿಕಾರಿಗಳ ಆದೇಶದ ಕಾರಣದಿಂದ ಬದಿಯಡ್ಕ ಮತ್ತು ಕಾಞಂಗಾಡ್ ಕ್ಯಾಂಪ್ಕೊ ಶಾಖೆಗಳಲ್ಲಿ ಅಡಿಕೆ ಖರೀದಿಸಲು ನಿರ್ಧರಿಸಲಾಗಿದೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

ಎ.15 ರಿಂದ  ಸೀಮಿತವಾಗಿ ಬದಿಯಡ್ಕ ಮತ್ತು ಕಾಞಂಗಾಡ್ ಕ್ಯಾಂಪ್ಕೊ ಶಾಖೆಗಳಲ್ಲಿ ಅಡಿಕೆ ಖರೀದಿಸಲು ನಿರ್ಧರಿಸಲಾಗಿದೆ. ಇಲ್ಲಿ  ಒಬ್ಬ ಸದಸ್ಯರಿಗೆ ಒಂದು ತಿಂಗಳಲ್ಲಿ ಗರಿಷ್ಠ 1 ಕ್ವಿಂಟಾಲ್ ಅಥವಾ ರೂ.25,000/- ದ ಅಡಿಕೆ ಮಾರಾಟಕ್ಕೆ ಅವಕಾಶ ,  ಪ್ರತಿದಿನ 30 ಸದಸ್ಯರಿಗೆ ಮಾತ್ರ ಅವಕಾಶ.
ಆಯಾ ಶಾಖಾಧಿಕಾರಿಗಳ / ನಮೂದಿಸಲ್ಪಟ್ಟ ನೌಕರರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಟೋಕನ್ ಪಡೆದುಕೊಳ್ಳತಕ್ಕದ್ದು, ಬೆಳಿಗ್ಗೆ ಗಂಟೆ 11.00 ರಿಂದ ,ಸಂಜೆ 5.00 ರ ವರೆಗೆ ಖರೀದಿ ನಡೆಯುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಸದಸ್ಯರು ಆಯಾ ಶಾಖೆಗಳಿಗೆ ಬರುವಾಗ ಕ್ಯಾಂಪ್ಕೊ ಸದಸ್ಯತ್ವದ ಗುರುತು ಚೀಟಿ ಕ್ಯಾಂಪ್ಕೊ ಕಾರ್ಡು, ಜಾಗದ ಪೊಸೆಶನ್ ಸರ್ಟಿಫಿಕೇಟ್ ಪತ್ರವನ್ನು ತಮ್ಮೊಂದಿಗೆ ಇಟ್ಟುಕೊಳ್ಳುವುದರ ಜತೆಗೆ ಕಡ್ಡಾಯವಾಗಿ ಮುಖಗವುಸು ( ಮಾಸ್ಕ್ ) ಹಾಕಿಕೊಂಡು ಕನಿಷ್ಠ 3 ಅಡಿಗಳ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದ್ದು. ಆರೋಗ್ಯ ಇಲಾಖೆ ತಿಳಿಸಿದ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು.

ಅಡಿಕೆ ಖರೀದಿ ನಡೆಸುವ ಶಾಖೆಗಳು: 

ಬದಿಯಡ್ಕ :
ಸಂಪರ್ಕ : ಪ್ರದೀಪ್ ಕುಮಾರ್ PH : 8200693185 ಮತ್ತು 8105764906

ಕಾಞಂಗಾಡ್ :
ಸಂಪರ್ಕ : ಕುಂಞಂಬು. PH : 8921390124

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror