ಬಳ್ಪದಲ್ಲಿ ಸಾಕಷ್ಟು ಅಭಿವೃದ್ಧಿ ನಡೆದಿದೆ-ಅಪಪ್ರಚಾರ ರಾಜಕೀಯ ಪ್ರೇರಿತ – ವೆಂಕಟ್ ವಳಲಂಬೆ

September 26, 2019
9:00 PM

ಸುಳ್ಯ: ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿದ ಬಳ್ಪದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕೆಲಸಗಳು ನಡೆದಿದೆ. ಬಳ್ಪದಲ್ಲಿ ಅಭಿವೃದ್ಧಿ ನಡೆದಿಲ್ಲ ಎಂಬುದು ರಾಜಕೀಯ ಪ್ರೇರಿತ ಅಪಪ್ರಚಾರ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.

ಆದರ್ಶ ಗ್ರಾಮವಾಗಿ ಅಯ್ಕೆಯಾದ ಮೇಲೆ ಬೇರೆ ಮೂಲಗಳಿಂದ ಬಳ್ಪಕ್ಕೆ ಅನುದಾನಗಳು ಹರಿದು ಬಂದಿದೆ. ಹಲವು ರಸ್ತೆಗಳು ಅಭಿವೃದ್ಧಿಯಾಗಿದೆ. ಕೆಲವೊಂದು ಸಮಸ್ಯೆಗಳು ಇರಬಹುದು, ಒಂದೊಂದು ಘಟನೆಯನ್ನು ಮುಂದಿರಿಸಿ ಇಲ್ಲಿ ಅಭಿವೃದ್ಧಿಯೇ ನಡೆದಿಲ್ಲ ಎಂಬ ಅಪಪ್ರಚಾರ ಸರಿಯಲ್ಲ. ಗ್ರಾಮದಲ್ಲಿ ಇನ್ನು ಅಭಿವೃದ್ಧಿಗೆ ಬಾಕಿ ಉಳಿದಿರುವ ಎಲ್ಲಾ ರಸ್ತೆಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ರಸ್ತೆ , ಬ್ಯಾಂಕಿಂಗ್ ವ್ಯವಸ್ಥೆ, ಜನರಿಗೆ ವಿವಿಧ ಮಾಹಿತಿ ಶಿಬಿರಗಳು, ಹೈನುಗಾರಿಕೆಗೆ ಆದ್ಯತೆ, ಹೊಗೆರಹಿತ ಮನೆ ಕಡೆಗೆ ಆದ್ಯತೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿದೆ. ಇತಿಹಾಸ ಪ್ರಸಿದ್ಧ ಬೋಗಾಯನ ಕೆರೆ ಅಭಿವೃದ್ಧಿಗೂ 1.8 ಕೋಟಿ ರೂ ಮಂಜೂರಾಗಿದೆ. ಅಭಿವೃದ್ಧಿ ಇಲ್ಲಿ ನಿರಂತರವಾಗಿ ನಡೆಯಲಿದೆ ಎಂದು ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror