ಬಳ್ಪದ ಕಲ್ಲೇರಿಯಲ್ಲಿ ಚಿರತೆ ದಾಳಿಗೆ ಕರು ಬಲಿ

June 5, 2019
5:27 PM

ಬಳ್ಪ: ಬಳ್ಪ ಗ್ರಾಮದ ಕಲ್ಲೇರಿಯ ಸುಬ್ರಹ್ಮಣ್ಯ ಭಟ್ ಅವರ ಹಟ್ಟಿಗೆ ದಾಳಿ ಮಾಡಿದ ಚಿರತೆ ಕರುವನ್ನು ತಿಂದ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.

Advertisement

ಕಳೆದ ಕೆಲವು ಸಮಯಗಳಿಂದ ಬಳ್ಪ ಗ್ರಾಮದ ಎಣ್ಣೆಮಜಲು, ಕಲ್ಲೇರಿ, ಆಲ್ಕಬೆ, ತುಂಬತ್ತಾಜೆ ಪ್ರದೇಶದಲ್ಲಿ  ಚಿರತೆ ಓಡಾಟ ಇತ್ತು. ಕೆಲವು ಮನೆಗಳಿಂದ ನಾಯಿಯನ್ನು  ಈಗಾಗಲೇ ಕೊಂದು ತಿಂದಿದೆ. ಕೆಲವು ಕಡೆ ನಾಯಿ ಬೊಬ್ಬೆ ಕೇಳಿ ಮನೆಯವರು ಬಂದಾಗ ಚಿರತೆ ಓಡಿದ ಬಗ್ಗೆಯೂ ಜನರು ಮಾಹಿತಿ ನೀಡುತ್ತಾರೆ.

ಮಂಗಳವಾರ ರಾತ್ರಿ ಬಳ್ಪದ ಮೆಕ್ಯಾನಿಕ್ ಒಬ್ಬರು ರಾತ್ರಿ ಮನೆಗೆ ತೆರಳುವಾಗ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ಕಲ್ಲೇರಿಯಲ್ಲಿ ಕರುವನ್ನು  ಕೊಂದು ತಿಂದಿದೆ. ಬಳ್ಪ ಗ್ರಾಮದಲ್ಲು ತೊಂದರೆ ನೀಡುತ್ತಿರುವ ಚಿರತೆ ನ್ನು ಹಿಡಿಯಲು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು
ಚಿರತೆ ದಾಳಿ ಮಾಡಿದ   ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರಾದ ರಮಾನಂದ ಎಣ್ಣೆಮಜಲು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |
May 14, 2025
7:29 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror