ಬಸವೇಶ್ವರ ದೇವಳದಲ್ಲಿ ಸಂಸ್ಕಾರ ಶಿಬಿರ

April 25, 2019
4:17 PM

ಸುಬ್ರಹ್ಮಣ್ಯ: ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಸ್ಥಾನದ ವಠಾರದಲ್ಲಿ ಮೇ.1 ರಿಂದ 3 ರವರೆಗೆ ಸಂಸ್ಕಾರ ಶಿಬಿರ ನಡೆಯಲಿದೆ. ಆಸಕ್ತರು ಶೀಘ್ರವೇ ತಮ್ಮ ಹೆಸರನ್ನು ನೊಂದಾಯಿಸಬೇಕು ಎಂದು ಶಿಬಿರ ಸಂಚಾಲಕ ಎಂ.ಕೃಷ್ಣ ಭಟ್ ಹಾಗೂ ಕಾರ್ಯದರ್ಶಿ ಸತ್ಯಶಂಕರ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

5 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ವಿಶೇಷ ಉಚಿತ ಸಂಸ್ಕಾರ ಶಿಬಿರವನ್ನು ಬಸವೇಶ್ವರ ದೇವಳದಲ್ಲಿ ಪ್ರಥಮವಾಗಿ ಆಯೋಜಿಸಲಾಗಿದ್ದು ಶಿಬಿರದ ಮೂಲಕ ಭವ್ಯವಾದ ನಮ್ಮ ಸಂಸ್ಕøತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಮಕ್ಕಳು ಶ್ರೇಷ್ಠರಾಗಬೇಕು ಎಂಬ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಶಿಬಿರಕ್ಕೆ ಕಳುಹಿಸಿ ಅವರಿಗೆ ಸಂಸ್ಕಾರ ಜ್ಞಾನ ಬೆಳೆಯಲು ಪ್ರೋತ್ಸಾಹಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.ಶಿಬಿರದಲ್ಲಿ ಶುಚಿತ್ವ, ಚಿಂತನೆ, ಶಾಂತಿ ಮಂತ್ರ, ಭಗವದ್ಗೀತಾ ಪಠಣ, ಪ್ರಾಣಾಯಾಮ, ಧ್ಯಾನ, ಬೌದ್ಧಿಕ, ಯೋಗ, ಆಟೋಟ ಸೇರಿದಂತೆ ಇತರ ವಿಚಾರಗಳ ಬಗ್ಗೆ ತಿಳಿಸಲಾಗುತ್ತದೆ.
ಮೇ.1 ರಂದು ಶಿಬಿರವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ ಉದ್ಘಾಟಿಸಲಿದ್ದಾರೆ.ಬಸವೇಶ್ವರ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸಭಾಧ್ಯಕ್ಷತೆ ವಹಿಸಲಿದ್ದಾರೆ.ವಿದ್ಯಾಸಾಗರ ಕಲಾ ಶಾಲೆಯ ಅಧ್ಯಕ್ಷ ಎಂ.ಹರೀಶ್ ಕಾಮತ್, ಕಲಾವಿದ ಕೆ.ಯಜ್ಞೇಶ್ ಆಚಾರ್, ಬಸವೇಶ್ವರ ದೇವಳದ ಪ್ರಧಾನ ಅರ್ಚಕ ಗಣೇಶ ಕೃಷ್ಣ ದೀಕ್ಷಿತ್ ಮುಖ್ಯಅತಿಥಿಗಳಾಗಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮ ಪಂಚಾಯತಿಗಳ ಮೂಲಕ ಸಹಜ ಬೇಸಾಯ ಅನುಷ್ಠಾನವಾಗಬೇಕು | ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ
June 1, 2024
1:10 PM
by: The Rural Mirror ಸುದ್ದಿಜಾಲ
‘ಹಸಿರೋತ್ಸವ’ | ಐಕಾಂತಿಕದಲ್ಲಿ ನಡೆಯುವ ಸಹಜ ಕೃಷಿ ಮತ್ತು ಸಹಜ ಜೀವನ ಉತ್ಸವ | ಹಸಿರಿನೊಂದಿಗೆ ಬೆರೆಯಿರಿ |
June 1, 2024
12:47 PM
by: The Rural Mirror ಸುದ್ದಿಜಾಲ
ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror