ಬಾಳಿಲದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ

July 12, 2019
9:00 AM

ಬಾಳಿಲ : 2019-20ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನೆಯ ಪೂರ್ವಭಾವಿ ಸಭೆ ಬಾಳಿಲ ವಿದ್ಯಾಬೋಧಿನಿ ಪ್ರೌಢ ಶಾಲೆಯಲ್ಲಿ  ನಡೆಯಿತು.

ಸಭೆಯನ್ನು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ ಉದ್ಘಾಟಿಸಿ ಇಲಾಖಾ ಗುಂಪಾಟ ಹಾಗು ಮೇಲಾಟಗಳ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಬೋಧಿನಿ ಪ್ರೌಢ ಶಾಲಾ ಸಂಚಾಲಕ ಎನ್. ವೆಂಕಟ್ರಮಣ ಭಟ್ ವಹಿಸಿದರು.

ವೇದಿಕೆಯಲ್ಲಿ ಗ್ರೇಡ್ 1 ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಗಣೇಶ್.ಪಿ, ಗ್ರೇಡ್ 1 ದೈಹಿಕ ಶಿಕ್ಷಕರ ಸಂಘ ರಾಜ್ಯ ಪರಿಷತ್ ಸದಸ್ಯ ಸಹದೇವ ಏರಾಜೆ, ದೈಹಿಕ ಶಿಕ್ಷಕರ ತಾಲೂಕು ಅಧ್ಯಕ್ಷೆ ವನಿತಾ ಕಾಂತಮಂಗಲ, ಗ್ರೇಡಡ್ 1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೂಫಿ ಪೆರಾಜೆ, ಗ್ರೇಡ್ 2 ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಧನಂಜಯ ಸಂಪಾಜೆ, ಸುಳ್ಯದ ಸ್ಪೋರ್ಟ್ ವನ್ ಮಾಲಕ ಅಬ್ದುಲ್ ರಝಾಕ್ ಉಪಸ್ಥಿತರಿದ್ದರು.

ಪ್ರಭಾರ ಮುಖ್ಯೋಪಾಧ್ಯಾಯ ಯಶೋಧರ ನಾರಾಲು ಸ್ವಾಗತಿಸಿ, ದೈಹಿಕ ಶಿಕ್ಷಕ ಹರಿಪ್ರಸಾದ್ ರೈ ಜಿ ವಂದಿಸಿದರು. ಶಿಕ್ಷಕ ಉದಯ್‍ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror