ಬಿಎಸ್ಎನ್ಎಲ್ ಉಪವಿಭಾಗೀಯ ಅಧಿಕಾರಿ ಆರ್ ಕೆ ಭಟ್ ಸೇವಾ ನಿವೃತ್ತಿ

October 31, 2019
3:04 PM

ಸುಳ್ಯ: ಸುಳ್ಯ ತಾಲೂಕಿನಲ್ಲಿ ಬಿ ಎಸ್ ಎನ್ ಎಲ್ ನಲ್ಲಿ  17 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿದ್ದ ರಾಮಕೃಷ್ಣ ಭಟ್ ಪಿ. ಸೇವಾ ನಿವೃತ್ತಿಯಾಗುತ್ತಿದ್ದಾರೆ.

ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪೈರುಪುಣಿಯ ನಾರಾಯಣ ಭಟ್ಟ ಮತ್ತು ತಾಯಿ ಸರಸ್ವತಿಯವರ ಹಿರಿಯ ಪುತ್ರನಾದ ರಾಮಕೃಷ್ಣ ಭಟ್ ಅವರು  ಪುತ್ತೂರು ಫಿಲೋಮಿನ ಕಾಲೇಜಿನಲ್ಲಿ ಬಿಯಸ್ಸಿ ಪದವೀಧರರಾದ ಬಳಿಕ 1983 ರಲ್ಲಿ ಅಂದಿನ ಅಂಚೆ ಮತ್ತು ತಂತಿ ಇಲಾಖೆಯಲ್ಲಿ ಟೆಲಿಫೋನ್ ಆಪರೇಟರ್ ಆಗಿ ಕಾರವಾರ ವಿಭಾಗಲ್ಲಿ ನಿಯುಕ್ತರಾದರು. ನಂತರ  ಉಡುಪಿಯಲ್ಲಿ 6 ವರ್ಷ,  ಕೊಡಗಿನಲ್ಲಿ 5 ವರ್ಷ,  ಉಪ್ಪಿನಂಗಡಿಯಲ್ಲಿ 8 ವರ್ಷ ಮತ್ತು ಸುಳ್ಯ ತಾಲೂಕಿನಲ್ಲಿ 17 ವರ್ಷ ಬೇರೆ ಬೇರೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿ ನಿವೃತ್ತಿಯಾಗುತ್ತಿದ್ದಾರೆ. ಒಟ್ಟು ಸುಮಾರು 36 ವರ್ಷಗಳ ಕಾಲ ಟೆಲಿಕಾಂ ಸೇವೆಯಲ್ಲಿದ್ದರು.  ಈ  ನಡುವೆ ಕಳೆದ 10 ವರ್ಷಗಳಿಂದ ತಮ್ಮ ಬಿಡುವಿನ ಸಮಯದಲ್ಲಿ ಆರ್ಟ್ ಆಫ್ ಲಿವಿಂಗ್ ಶಿಕ್ಷಕರಾಗಿಗೂ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ
ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |
March 12, 2025
7:10 AM
by: The Rural Mirror ಸುದ್ದಿಜಾಲ
ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ
March 12, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror