ಬಿಜೆಪಿಯದ್ದು ಅಸಹಕಾರದ ನಾಟಕ: ಎಂ. ವೆಂಕಪ್ಪ ಗೌಡ ಲೇವಡಿ

September 3, 2019
6:27 PM

ಸುಳ್ಯ: ಕಾರ್ಯಕರ್ತರ ಮುಂದೆ ಅಸಹಕಾರ ಚಳವಳಿಯ ನಾಟಕ ಮಾಡುವ ಬಿಜೆಪಿ ನಾಯಕರು ಕದ್ದು ಮುಚ್ಚಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಇದೆಲ್ಲವನ್ನು ನೋಡುವಾಗ ಬಿಜೆಪಿಗರು ಒಳಗೊಂದು – ಹೊರಗೊಂದು ಮಾತನಾಡುವವರು. ಇವರಿಗೆ ಕಾರ್ಯಕರ್ತರ, ಜನರ ಬಗ್ಗೆಯಾಗಲೀ ಅಥವಾ ಶಾಸಕ ಅಂಗಾರ ಅವರ ಬಗ್ಗೆ ಆಗಲೀ ಕಾಳಜಿ ಇಲ್ಲ. ಬದಲಾಗಿ ಇವರಿಗೆ ಇರುವುದು ಸ್ವಾರ್ಥ ಲಾಭದ ರಾಜಕೀಯ ಎಂದು ಕೆ.ಪಿ‌.ಸಿ.ಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಆರೋಪಿಸಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಸಹಾಕಾರ ಚಳುವಳಿ ಕಾಂಗ್ರೆಸ್ ನವರ ಸೃಷ್ಠಿ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಖಂಡಿಸಿದರು. ಬಿಜೆಪಿ ಕಚೇರಿಯಲ್ಲಿ 300ರಷ್ಟು ಮಂದಿ ಜನಪ್ರತಿನಿಧಿಗಳು ಸೇರಿ ಸಭೆ ನಡೆಸಿ ನಿರ್ಧಾರ ಕೈಗೊಂಡು ಅಸಹಕಾರ ಚಳವಳಿ ಎಂದು ಘೋಷಿಸಿದ್ದು ಬಿಜೆಪಿಗರೋ ಅಥವಾ ಕಾಂಗ್ರೆಸ್-ಜೆಡಿಎಸ್ ನವರೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಮೊದಲು ತಿಳಿದುಕೊಳ್ಳಲಿ. ಆ ಬಳಿಕ ಕಾಂಗ್ರೆಸ್ ಮೇಲೆ ಆರೋಪ ಮಾಡಲಿ ಎಂದು ಹೇಳಿದರು. ಅಂಗಾರರು ಮಂತ್ರಿ ಪದವಿಯಿಂದ ವಂಚಿತರಾದಾಗ ಬಿಜೆಪಿಯವರು ಅಸಹಕಾರದ ನಿರ್ಣಯ ಕೈಗೊಂಡ ಸಂದರ್ಭ ನೀವು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಚಳವಳಿ ಮಾಡಿ ಎಂದು ನಾವು ಸಲಹೆ ನೀಡಿದ್ದೆವು. ಆದರೆ ಬಿಜೆಪಿಯವರ ಚಳವಳಿ ಕೇವಲ ನಾಟಕ ಎಂದು ಈಗ ಸಾಬೀತಾಯಿತು ಎಂದು ಅವರು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್, ನ.ಪಂ.ಸದಸ್ಯ ಶರೀಫ್ ಕಂಠಿ, ಲಕ್ಷ್ಮಣ ಶೆಣೈ, ಕೆ.ಕೆ.ಹರಿಪ್ರಸಾದ್ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ | ದಾವಣಗೆರೆಯಲ್ಲಿ ರಾಜ್ಯ ಚುನಾವಣಾ ಆಯುಕ್ತರಿಂದ ಸಿದ್ಧತೆ ಪರಿಶೀಲನೆ
November 20, 2025
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror