ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಸುಳ್ಯದಲ್ಲಿ ಅದ್ದೂರಿ ಸ್ವಾಗತ

October 12, 2019
8:34 PM

ಸುಳ್ಯ:ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಸುಳ್ಯಕ್ಕೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ಮಡಿಕೇರಿಯಿಂದ ಆಗಮಿಸಿದ ಅವರನ್ನು ಅರಂಬೂರಿನಲ್ಲಿ ಸ್ವಾಗತಿಸಿ ವಾಹನ ಮೆರವಣಿಗೆಯ ಮೂಲಕ ಕರೆ ತರಲಾಯಿತು. ಚೆಂಡೆ, ವಾದ್ಯ ಘೋಷಗಳೊಂದಿಗೆ, ಸಿಡಿ ಮದ್ದಿನ ಅಬ್ಬರದೊಂದಿಗೆ ಬಿಜೆಪಿ ಕಚೇರಿಯ ಬಳಿಯಲ್ಲಿ ಬಿಜೆಪಿ ನಾಯಕರು ಹಾಗು ಕಾರ್ಯಕರ್ತರು ಸ್ವಾಗತಿಸಿದರು. ಬಳಿಕ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಳಿನ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಯಿತು.

ನ.ಪಂ.ಮಾಜಿ ಅಧ್ಯಕ್ಷರಾದ ಎನ್.ಎ.ರಾಮಚಂದ್ರ, ಪ್ರಕಾಶ್ ಹೆಗ್ಡೆ ಸನ್ಮಾನ ನೆರವೇರಿಸಿದರು.ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಎ.ವಿ.ತೀರ್ಥರಾಮ, ಪಿ.ಕೆ.ಉಮೇಶ್, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ
July 7, 2026
12:25 PM
by: ಸಾಯಿಶೇಖರ್ ಕರಿಕಳ
ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ
July 7, 2026
11:57 AM
by: ಮಹೇಶ್ ಪುಚ್ಚಪ್ಪಾಡಿ
ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror