ಬಿಳಿನೆಲೆ : ಸ್ವಯಂಪ್ರೇರಿತ ಸ್ವಚ್ಚತಾ ಸೇವೆಯಿಂದ ಆರೋಗ್ಯ ಪೂರ್ಣ ಪರಿಸರ ನಿರ್ಮಾಣವಾಗುತ್ತದೆ.ಇದರಿಂದ ಭವಿಷ್ಯದ ಜೀವನವು ಸುಗಮವಾಗಲು ಸಾಧ್ಯ ಎಂದು ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀಕೃಷ್ಣ ಶರ್ಮ ಹೇಳಿದರು.
ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ, ಕೆ.ವಿ.ಜಿ.ಕಾನೂನು ಮಹಾವಿದ್ಯಾಲಯ ಸುಳ್ಯ ಹಾಗೂ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಸ್ವಚ್ಚತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೆಜಿವಿ ಕಾಲೇಜಿನ ವಸಂತ ಕುಮಾರ್, ಗೋಪಾಲಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಣ ಶಿವರಾಮ ಯೇನೆಕಲ್ ಮುಖ್ಯಅತಿಥಿಗಳಾಗಿದ್ದರು.ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಎಚ್.ಎಸ್, ಉಪನ್ಯಾಸಕ ಕೌಶಿಕ್ ವೇದಿಕೆಯಲ್ಲಿದ್ದರು.
ಸಮಾರಂಭದ ಬಳಿಕ ಎನ್ಎಸ್ಎಸ್ ವಿದ್ಯಾರ್ಥಿಗಳು ಶಾಲಾ ಆವರಣ, ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತಾ ಸೇವೆ ನೆರವೇರಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ"