ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯದ ಎನ್ ಎಸ್ .ಯು.ಐ.ಉಸ್ತುವಾರಿಯಾಗಿ ಸಿ.ವಿ. ಆದಿಲ್ ಅಲಿ ಆಯ್ಕೆ

February 16, 2020
2:57 PM

ಸುಳ್ಯ: ದೆಹಲಿಯ ಎನ್.ಎಸ್.ಯು.ಐ ಸಂದರ್ಶನದಲ್ಲಿ ದೇಶಾದ್ಯಂತ ಆಯ್ದ 2500 ವಿದ್ಯಾರ್ಥಿ ನಾಯಕರಲ್ಲಿ 200 ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯಕ್ಕೆ ಎನ್.ಎಸ್.ಯು.ಐನ ಉಸ್ತುವಾರಿಯನ್ನಾಗಿ ಸಿ.ವಿ ಆದಿಲ್ ಅಲಿ ಇವರನ್ನು ರಾಷ್ಟೀಯ ಎನ್.ಎಸ್.ಯು.ಐ ಅಧ್ಯಕ್ಷ ನೀರಾಜ್ ಕುಂದನ್ ಆಯ್ಕೆ ಮಾಡಿರುತ್ತಾರೆ.

ಇವರು ಕಲ್ಲಿಕೋಟೆ ಸಿ.ವಿ.ರಾಫಿ ಹಾಗೂ ಅರಂತೋಡಿನ ರಾಜ್ಯ ನಾಯಕರಾದ ಟಿ.ಎಮ್ .ಶಹೀದ್ ತೆಕ್ಕಿಲ್ ರವರ ಸಹೋದರಿ ಟಿ.ಎಮ್ ಜಾಹಿರಾ ಬಿ ತೆಕ್ಕಿಲ್ ಇವರ ಪುತ್ರನಾಗಿದ್ದು ಅರಂತೋಡಿನಲ್ಲಿ ಹುಟ್ಟಿ ಬೆಳೆದ ಇವರು ಕ್ಯಾಲಿಕಟ್ ಲಾ ಕಾಲೇಜಿನ ಕಾನೂನು ಪದವಿ ವಿದ್ಯಾರ್ಥಿ ಆಗಿದ್ದಾರೆ. ಕಾನೂನು ವಿದ್ಯಾರ್ಥಿಯಾಗಿರುವಾಗಲೇ ಅನೇಕ ಜನಪರ ಹೋರಾಟ ಮಾಡಿದ್ದು ಗ್ರಾಹಕರ ವ್ಯಾಜ್ಯ ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿ ವಿಜಯವಾಗಿ ಕೇರಳ ರಾಜ್ಯಾದ್ಯಂತ ಹೆಸರು ವಾಸಿಯಾಗಿರುತ್ತಾರೆ. ಅಲ್ಲದೇ ಅಲಿಯಾ ಹಯಾರ್ ಸೆಕೆಂಡರಿ ಸ್ಕೂಲ್ ಕಾಸರಗೋಡಿನ ವಿದ್ಯಾರ್ಥಿ ನಾಯಕನಾಗಿ ನೆಹರು ಯುವ ಕೇಂದ್ರ ಕ್ಯಾಲಿಕಟ್ ಸದಸ್ಯನಾಗಿ ಕೇರಳ ರಾಜ್ಯದ ಯುತ್ ಕಮಿಷನ್ ಕ್ವಾಡಿನಟರಿರಾಗಿ ಕ್ಯಾಲಿಕಟ್ ಜಿಲ್ಲಾ ಕೆ.ಎಸ್.ಯು ನ ಕಾರ್ಯದರ್ಶಿಯಾಗಿ ಮತ್ತು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕರಾಗಿರುತ್ತಾರೆ. ಅಲ್ಲದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಪರವಾಗಿ ಕೆಲಸವನ್ನು ನಿರ್ವಹಿಸಿರುತ್ತಾರೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror