ಬೆನ್ನತ್ತಿ ಬಂದ ಮಾಯೆ

May 10, 2019
12:43 AM
ಬೆಳಕನು ಕಾಣಲು‌ ಹಂಬಲಿಸಿ
ಕತ್ತಲೆಯ ಜಗದಿಂದ ಹೊರಬಂದೆ
ಬೆನ್ನ ಹಿಂದೆಯೇ ಮತ್ತಾವುದೋ ಕರಿ ಛಾಯೆ
ನನ್ನ ಹಿಂಬಾಲಿಸಲೆಂದೇ ಬಂದಂತಿದೆ
ಎಲ್ಲರೂ ಅಪರಿಚಿತರು ಕಂಡೊಮ್ಮೆ ಬೆರಗಾದೆ
ಅಮ್ಮ , ಅಪ್ಪ‌ ,ಅಜ್ಜ ,ಅಜ್ಜಿ ಎಂದವರು ಪರಿಚಯಿಸಿದರು
ಹೌದು! ಅಪರಿಚಿತರಲ್ಲ ಇವರು ನನ್ನವರು
ಸದಾ ನನ್ನ ಬೆನ್ನತ್ತಿರುವ ಆ ವ್ಯಾಘ್ರ ರೂಪ ಯಾರದು?
ಹೆಜ್ಜೆ ಕಲಿತೆ, ಓಡಲರಿತೆ‌ ಬಿಡಲಿಲ್ಲ‌ ಮಾಯೆ
ಹೋದಲೆಲ್ಲಾ ನನ್ನನ್ನೇ ಕೈ‌ ಬೀಸಿ ಕರೆಯುತಿದೆ
ಭಕ್ತಿಯಿಂದ ಬೇಡಿದೆ, ಕೈಯಲ್ಲಿದ್ದ ಹಣ ಸುರಿದೆ
ಇಲ್ಲ  ಅದು ಹಿಂಬಾಲಿಸಿದುದು ನನ್ನನ್ನೇ!
ಏಕೋ ಹಿಂತಿರುಗಿ ಮಾತನಾಡಬೇಕೆಸಿತು
ಇದು ನಿನ್ನ ಮನೆಯಲ್ಲ‌ ಎಂದು‌ ಮತ್ತೆ ಕರೆಯಿತು
ಇಲ್ಲಿರುವವರು ನನ್ನವರು ನಾ ಬರಲೊಲ್ಲೆ ಎಂದೆ
ಮತ್ತದೇ ದನಿ “ಅಲ್ಲಿದೆ ನಿನ್ನ ಮನೆ”
ಮಾಯೆಯ ಕಣ್ತಪ್ಪಿಸಿ ಓಡಿ ಸೋತು ಹೋದೆ
ನಾನೇ ಮನೆಯ ದಾರಿ ಹುಡುಕಿ ಮಾಯೆಯ ಕರೆದೆ…
ಬರಲಿಲ್ಲ ಅವಳು ಬಲು ಮಾಟಗಾತಿ..
ಅತ್ತು ಕರೆದು ದಾರಿ ತೋರೆಂದೆ ಬಗ್ಗಲಿಲ್ಲ ಅವಳು
ಮತ್ತೋಮ್ಮೆ ಅವಳೇ ಬಂದಳು ನನ್ನದು ಮೊಂಡುತನ
ಬರಲಿಲ್ಲವೆಂದರೂ ಬಿಡಲಿಲ್ಲ ಅವಳು
ಕೈ ಹಿಡಿದು ಆ ಮನೆಯ ದಾರಿ ತೋರಿದಳು
ಮತ್ತೆಂದು ಈ ಮನೆಗೆ ದಾರಿ ಸಿಗದಂತೆ ಮಾಯ ಮಾಡಿದಳು..
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಎಲ್ಲರೂ ಒಂದಾಗಿ ಬಾಳುವ, ಮೇಳು-ಕೀಳು ಮದ -ಮತ್ಸರ ಬಿಟ್ಟು ಬದುಕುವ | ಎಲ್ಲಾರೂ ಮಾಡುವುದು ಹೊಟ್ಟೆಗಾಗಿ…ಗೇಣು ಬಟ್ಟೆಗಾಗಿ |
April 20, 2024
4:21 PM
by: The Rural Mirror ಸುದ್ದಿಜಾಲ
ಚುನಾವಣೆ ಹಾಗೂ “ನೀತಿ” ಸಂಹಿತೆ ಮತ್ತು ಜಗಳ…! |
April 18, 2024
3:00 PM
by: ಮಹೇಶ್ ಪುಚ್ಚಪ್ಪಾಡಿ
ದೇವರು ಧರ್ಮ ಭಕ್ತಿ ಒಂದು ಒಣ ಆಡಂಬರವಲ್ಲ, ಅದು ನಮ್ಮ ಆತ್ಮಸಾಕ್ಷಿಯ ನಡವಳಿಕೆ | ರಾಮನವಮಿ ಪ್ರಯುಕ್ತ ಬರೆಯುತ್ತಾರೆ ವಿವೇಕಾನಂದ. ಎಚ್. ಕೆ.
April 17, 2024
4:37 PM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror