ಬೆನ್ನತ್ತಿ ಬಂದ ಮಾಯೆ

May 10, 2019
12:43 AM
ಬೆಳಕನು ಕಾಣಲು‌ ಹಂಬಲಿಸಿ
ಕತ್ತಲೆಯ ಜಗದಿಂದ ಹೊರಬಂದೆ
ಬೆನ್ನ ಹಿಂದೆಯೇ ಮತ್ತಾವುದೋ ಕರಿ ಛಾಯೆ
ನನ್ನ ಹಿಂಬಾಲಿಸಲೆಂದೇ ಬಂದಂತಿದೆ
ಎಲ್ಲರೂ ಅಪರಿಚಿತರು ಕಂಡೊಮ್ಮೆ ಬೆರಗಾದೆ
ಅಮ್ಮ , ಅಪ್ಪ‌ ,ಅಜ್ಜ ,ಅಜ್ಜಿ ಎಂದವರು ಪರಿಚಯಿಸಿದರು
ಹೌದು! ಅಪರಿಚಿತರಲ್ಲ ಇವರು ನನ್ನವರು
ಸದಾ ನನ್ನ ಬೆನ್ನತ್ತಿರುವ ಆ ವ್ಯಾಘ್ರ ರೂಪ ಯಾರದು?
ಹೆಜ್ಜೆ ಕಲಿತೆ, ಓಡಲರಿತೆ‌ ಬಿಡಲಿಲ್ಲ‌ ಮಾಯೆ
ಹೋದಲೆಲ್ಲಾ ನನ್ನನ್ನೇ ಕೈ‌ ಬೀಸಿ ಕರೆಯುತಿದೆ
ಭಕ್ತಿಯಿಂದ ಬೇಡಿದೆ, ಕೈಯಲ್ಲಿದ್ದ ಹಣ ಸುರಿದೆ
ಇಲ್ಲ  ಅದು ಹಿಂಬಾಲಿಸಿದುದು ನನ್ನನ್ನೇ!
ಏಕೋ ಹಿಂತಿರುಗಿ ಮಾತನಾಡಬೇಕೆಸಿತು
ಇದು ನಿನ್ನ ಮನೆಯಲ್ಲ‌ ಎಂದು‌ ಮತ್ತೆ ಕರೆಯಿತು
ಇಲ್ಲಿರುವವರು ನನ್ನವರು ನಾ ಬರಲೊಲ್ಲೆ ಎಂದೆ
ಮತ್ತದೇ ದನಿ “ಅಲ್ಲಿದೆ ನಿನ್ನ ಮನೆ”
ಮಾಯೆಯ ಕಣ್ತಪ್ಪಿಸಿ ಓಡಿ ಸೋತು ಹೋದೆ
ನಾನೇ ಮನೆಯ ದಾರಿ ಹುಡುಕಿ ಮಾಯೆಯ ಕರೆದೆ…
ಬರಲಿಲ್ಲ ಅವಳು ಬಲು ಮಾಟಗಾತಿ..
ಅತ್ತು ಕರೆದು ದಾರಿ ತೋರೆಂದೆ ಬಗ್ಗಲಿಲ್ಲ ಅವಳು
ಮತ್ತೋಮ್ಮೆ ಅವಳೇ ಬಂದಳು ನನ್ನದು ಮೊಂಡುತನ
ಬರಲಿಲ್ಲವೆಂದರೂ ಬಿಡಲಿಲ್ಲ ಅವಳು
ಕೈ ಹಿಡಿದು ಆ ಮನೆಯ ದಾರಿ ತೋರಿದಳು
ಮತ್ತೆಂದು ಈ ಮನೆಗೆ ದಾರಿ ಸಿಗದಂತೆ ಮಾಯ ಮಾಡಿದಳು..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ – ಎಳೆಯ ಹಲಸಿನ ಕಾಯಿ ಬಾಲ್ : ಕರಕರಾ, ರುಚಿಕರ ಮತ್ತು ಆರೋಗ್ಯಕರ ಸ್ನ್ಯಾಕ್
April 11, 2026
6:16 PM
by: ದಿವ್ಯ ಮಹೇಶ್
ಕುಟುಂಬದಲ್ಲೇ ಆರೋಗ್ಯದ ಬೀಜ – ಕುಟುಂಬದಲ್ಲಿ ಆರೋಗ್ಯಕರ ಅಭ್ಯಾಸಗಳ ಬೆಳವಣಿಗೆ
April 10, 2026
6:11 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror