ಬೆನ್ನತ್ತಿ ಬಂದ ಮಾಯೆ

May 10, 2019
12:43 AM
ಬೆಳಕನು ಕಾಣಲು‌ ಹಂಬಲಿಸಿ
ಕತ್ತಲೆಯ ಜಗದಿಂದ ಹೊರಬಂದೆ
ಬೆನ್ನ ಹಿಂದೆಯೇ ಮತ್ತಾವುದೋ ಕರಿ ಛಾಯೆ
ನನ್ನ ಹಿಂಬಾಲಿಸಲೆಂದೇ ಬಂದಂತಿದೆ
ಎಲ್ಲರೂ ಅಪರಿಚಿತರು ಕಂಡೊಮ್ಮೆ ಬೆರಗಾದೆ
ಅಮ್ಮ , ಅಪ್ಪ‌ ,ಅಜ್ಜ ,ಅಜ್ಜಿ ಎಂದವರು ಪರಿಚಯಿಸಿದರು
ಹೌದು! ಅಪರಿಚಿತರಲ್ಲ ಇವರು ನನ್ನವರು
ಸದಾ ನನ್ನ ಬೆನ್ನತ್ತಿರುವ ಆ ವ್ಯಾಘ್ರ ರೂಪ ಯಾರದು?
ಹೆಜ್ಜೆ ಕಲಿತೆ, ಓಡಲರಿತೆ‌ ಬಿಡಲಿಲ್ಲ‌ ಮಾಯೆ
ಹೋದಲೆಲ್ಲಾ ನನ್ನನ್ನೇ ಕೈ‌ ಬೀಸಿ ಕರೆಯುತಿದೆ
ಭಕ್ತಿಯಿಂದ ಬೇಡಿದೆ, ಕೈಯಲ್ಲಿದ್ದ ಹಣ ಸುರಿದೆ
ಇಲ್ಲ  ಅದು ಹಿಂಬಾಲಿಸಿದುದು ನನ್ನನ್ನೇ!
ಏಕೋ ಹಿಂತಿರುಗಿ ಮಾತನಾಡಬೇಕೆಸಿತು
ಇದು ನಿನ್ನ ಮನೆಯಲ್ಲ‌ ಎಂದು‌ ಮತ್ತೆ ಕರೆಯಿತು
ಇಲ್ಲಿರುವವರು ನನ್ನವರು ನಾ ಬರಲೊಲ್ಲೆ ಎಂದೆ
ಮತ್ತದೇ ದನಿ “ಅಲ್ಲಿದೆ ನಿನ್ನ ಮನೆ”
ಮಾಯೆಯ ಕಣ್ತಪ್ಪಿಸಿ ಓಡಿ ಸೋತು ಹೋದೆ
ನಾನೇ ಮನೆಯ ದಾರಿ ಹುಡುಕಿ ಮಾಯೆಯ ಕರೆದೆ…
ಬರಲಿಲ್ಲ ಅವಳು ಬಲು ಮಾಟಗಾತಿ..
ಅತ್ತು ಕರೆದು ದಾರಿ ತೋರೆಂದೆ ಬಗ್ಗಲಿಲ್ಲ ಅವಳು
ಮತ್ತೋಮ್ಮೆ ಅವಳೇ ಬಂದಳು ನನ್ನದು ಮೊಂಡುತನ
ಬರಲಿಲ್ಲವೆಂದರೂ ಬಿಡಲಿಲ್ಲ ಅವಳು
ಕೈ ಹಿಡಿದು ಆ ಮನೆಯ ದಾರಿ ತೋರಿದಳು
ಮತ್ತೆಂದು ಈ ಮನೆಗೆ ದಾರಿ ಸಿಗದಂತೆ ಮಾಯ ಮಾಡಿದಳು..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ವೃದ್ಧಾಪ್ಯದಲ್ಲಿ ಬೇಕಾಗಿರುವುದು ಹಣವಲ್ಲ, ಗೌರವ ಮತ್ತು ಆತ್ಮೀಯತೆ
May 15, 2026
8:33 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ
May 1, 2026
10:20 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror