ಬೆಳ್ಳಾರೆಯಲ್ಲಿ ದಿ|ಗಂಗಾಧರ ಬೆಳ್ಳಾರೆ ಸಂಸ್ಮರಣೆ ಮತ್ತು ಉಪನ್ಯಾಸ

September 12, 2019
12:00 PM

ಬೆಳ್ಳಾರೆ:ಅಸಂಖ್ಯಾತ ಜನರ ಮನೋವಿಕಾಸ ಮಾಡುವ ಮೂಲಕ ಅವರಲ್ಲಿನ ವ್ಯಕ್ತಿತ್ವವನ್ನು ಬೆಳಗಿಸುವ ಶ್ರೇಷ್ಠ ಕಾರ್ಯವನ್ನು ಗಂಗಾಧರ ಬೆಳ್ಳಾರೆ ಮಾಡಿದ್ದರು. ಮನೋವಿಶ್ಲೇಷಕರಾಗಿ, ಕಥೆಗಾರ, ಯಕ್ಷಗಾನ,ನಾಟಕ, ಸಿನಿಮಾ ಹಾಗೂ ತರಬೇತುದಾರರಾಗಿ ಹಲವು ಅಯಾಮಗಳಲ್ಲಿ ಗುರುತಿಸಿಕೊಂಡಿದ್ದ ಬೆಳ್ಳಾರೆಯವರು ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದರು ಎಂದು ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ ಹೇಳಿದರು.

ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ನಡೆದ ಖ್ಯಾತ ಮನೋ ವಿಶ್ಲೇಷಕ ದಿ|ಗಂಗಾಧರ ಬೆಳ್ಳಾರೆಯ ಸಂಸ್ಮರಣೆ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸ್ಮರಣಾ ಮಾತುಗಳನ್ನಾಡಿದರು.

‘ಹದಿಹರೆಯದ ಮನೋವಿಜ್ಞಾನ’ ಎಂಬ ವಿಷಯದ ಬಗ್ಗೆ ಆಪ್ತಸಮಾಲೋಚಕಿ, ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಸಂಶೋಧನಾ ವಿದ್ಯಾರ್ಥಿನಿ ಶೆಫಾಲಿ ಕೆ.ಎಸ್ ಉಪನ್ಯಾಸ ನೀಡಿದರು.

ಕುಂಬ್ರ ಮೂಕಾಂಬಿಕಾ ಪ್ರಿಂಟರ್ಸ್‍ನ ದಿವಾಕರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬೆಳ್ಳಾರೆಯ ಸಾರ್ವಜನಿಕ ಗ್ರಂಥಾಲಯಕ್ಕೆ ದಿ|ಗಂಗಾಧರ ಬೆಳ್ಳಾರೆಯವರು ಬರೆದ ಪುಸ್ತಕಗಳನ್ನು ದಿ|ಗಂಗಾಧರ ಬೆಳ್ಳಾರೆಯವರ ಮಾತೃಶ್ರೀ ಪ್ರೇಮಲೀಲಾ ಟಿ.ಡಿ ಅವರು ಗ್ರಂಥಪಾಲಕಿ ಶಶಿಕಲಾ ಅವರಿಗೆ ಹಸ್ತಾಂತರಿಸಿದರು. ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಪುತ್ಯ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ಜಯರಾಮ ಉಮಿಕ್ಕಳ ಉಪಸ್ಥಿತರಿದ್ದರು.

ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸ್ವಾಗತಿಸಿದರು. ಉಪನ್ಯಾಸಕಿ ಅಮಿತಾ ವೈ ಶೆಟ್ಟಿ ವಂದಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ಮೌಸಮಿ ಸಹಕರಿಸಿದರು. ಅಪರಾಹ್ನ ದಿ|ಗಂಗಾಧರ ಬೆಳ್ಳಾರೆಯವರು ಅಭಿನಯಿಸಿದ್ದ ಗಾನಸಿರಿ ಕ್ರಿಯೇಷನ್ಸ್‍ವರ ‘ಕನಸು’ಕಣ್ಣು ತೆರೆದಾಗ ಕನ್ನಡ ಚಲನಚಿತ್ರದ ಪ್ರದರ್ಶನ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror