ಬೆಳ್ಳಾರೆಯಲ್ಲಿ ಸುನ್ನೀ ಸೌಹಾರ್ದ ವೇದಿಕೆ ಅಸ್ತಿತ್ವಕ್ಕೆ ; ಘೋಷಣಾ ಸಮಾವೇಶ

September 30, 2019
11:47 PM

ಬೆಳ್ಳಾರೆ: ಬೆಳ್ಳಾರೆ ಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಸುನ್ನೀ ಸೌಹಾರ್ದ ವೇದಿಕೆಯ ಅಧಿಕೃತ ಚಾಲನೆ ಹಾಗೂ ಘೋಷಣಾ ಸಮಾವೇಶವು ಸೋಮವಾರ ಸಂಜೆ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಸೌಹಾರ್ದ ವೇದಿಕೆಯ ಸ್ಥಾಪಕಧ್ಯಕ್ಷ ಹಸೈನಾರ್ ಹಾಜಿ ಸಿ ಎಂ ವಹಿಸಿದ್ದರು. ಸೌಹಾರ್ದ ವೇದಿಕೆಯ ಪದಾಧಿಕಾರಿಗಳ ಹೆಸರನ್ನು ಯೂಸುಫ್ ಮುಸ್ಲಿಯಾರ್ ಘೋಷಣೆ ಮಾಡಿದರು. ಸುನ್ನೀ ಸೌಹಾರ್ದ ಸಮಿತಿ ಸದಸ್ಯರುಗಳಾದ ಶಾಫಿ ಬೆಳ್ಳಾರೆ ಹಾಗೂ ಹಸನ್ ಸಖಾಫಿ ಬೆಳ್ಳಾರೆ ಸೌಹಾರ್ದತೆ ಕುರಿತು ಮುಖ್ಯ ಭಾಷಣ ಮಾಡಿದರು. ಹನೀಫ್ ಬೆಳ್ಳಾರೆ ಪಾಸ್ತಾವಿಕ ಭಾಷಣ ಮಾಡಿದರು.

ಬೆಳ್ಳಾರೆ ಜಮಾಅತಿನ ಅಧ್ಯಕ್ಷ ಕೆ ಎಂ ಮಹಮ್ಮದ್ ಹಾಜಿ ಬೆಳ್ಳಾರೆ , ಜಮಾಅತಿನ ಮಾಜಿ ಅಧ್ಯಕ್ಷ ರುಗಳಾದ ಮೂಸಾ ಹಾಜಿ ಕಲ್ಲಪಣೆ ,ಹಾಜಿ ಮಹಮ್ಮದ್ ಇಂಜಿನಿಯರ್ ಬೆಳ್ಳಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೌಹಾರ್ದ ವೇದಿಕೆ ಯ ಪ್ರಧಾನ ಕಾರ್ಯದರ್ಶಿ ಜಲೀಲ್ ಎ ಆರ್ ಸ್ವಾಗತಿಸಿ , ಸದಸ್ಯ ಕೆ ಎ ಬಶೀರ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

ಅ.6 ರಂದು ಸುನ್ನೀ ಸೌಹಾರ್ದ ವೇದಿಕೆ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಬೆಳ್ಳಾರೆ ದೇವಿಹೈಟ್ಸ್ ನಲ್ಲಿ ಮಾಡುವುದೆಂದು ಸಂಘಟಕರು ಇದೇ ವೇಳೆ ಪ್ರಕಟನೆಗೆ ತಿಳಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror