ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಹಿರಿಯ ನಾಗರೀಕರ ಸಭೆ ನಡೆಯಿತು. ಠಾಣಾಧಿಕಾರಿ ಈರಯ್ಯ ಡಿ.ಎನ್ ಮಾಹಿತಿ ನೀಡಿ, ಮನೆಗೆ ಬರುವ ಅಪರಿಚಿತ ವ್ಯಕ್ತಿಗಳು, ಚಿನ್ನ ಪಾಲೀಶ್ ಮಾಡುವವರು, ಅನಾಮಧೇಯ ಕರೆ, ಬ್ಯಾಂಕ್ ಖಾತೆ ವಿವರ ಕೇಳುವ, ಎ.ಟಿ.ಎಂ ಸಂಖ್ಯೆ ಕೇಳುವವರ ಬಗ್ಗೆ ಜಾಗ್ರತೆ ವಹಿಸಲು ಸೂಚಿಸಿದರು. ಮನೆ ಮನೆಗಳಿಗೆ ಹಾಸಿಗೆ ದುರಸ್ಥಿ ನೆಪದಲ್ಲಿ, ಗುಜುರಿ ವ್ಯಾಪಾರಿ ಹೆಸರಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರವಿರುವಂತೆ ಸಲಹೆ ನೀಡಿದರು.
ಹಿರಿಯ ನಾಗರೀಕರ ಗುರುತಿನ ಚೀಟಿ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಬೇಷನರಿ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಸೇರಿದಂತೆ ಠಾಣೆಯ ಸಿಬಂದಿಗಳು, ಸುತ್ತಮುತ್ತಲಿನ ಊರುಗಳ ಹಿರಿಯ ನಾಗರೀಕರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಬೆಳ್ಳಾರೆ ಠಾಣೆಯಲ್ಲಿ ಹಿರಿಯ ನಾಗರೀಕರ ಸಭೆ"