ಬೆಳ್ಳಾರೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಈರಯ್ಯ ಡಿ.ಎನ್.ರವರಿಗೆ ಬೀಳ್ಕೊಡುಗೆ

November 20, 2019
2:23 PM

ಸುಳ್ಯ:ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸುಮಾರು 2 ವರ್ಷಗಳಿಂದ ಸಬ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಯ್ಯ ಡಿ.ಎನ್.ರವರಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು ಅವರಿಗೆ ಬೆಳ್ಳಾರೆ ಠಾಣೆಯ ವತಿಯಿಂದ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮವು ಪೆರುವಾಜೆಯ ಜೆ.ಡಿ.ಅಡಿಟೋರಿಯಂನಲ್ಲಿ ನಡೆಯಿತು.

ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಸತೀಶ್ ಕುಮಾರ್ ಈರಯ್ಯ ಡಿ.ಎನ್-ಚಂಪಲತಾ ದಂಪತಿಗಳನ್ನು ಶಾಲುಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈರಯ್ಯ ಅವರನ್ನು ಬೆಳ್ಳಾರೆ ಠಾಣೆಯ ಹೋಂಗಾರ್ಡಗಳ ವತಿಯಿಂದ ಮತ್ತು ಪಿಗ್ಮಿ ಸಂಗ್ರಾಹಕರ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಈರಯ್ಯರವರು ಸುಮಾರು 2 ವರ್ಷಗಳ ಕಾಲ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಸೇವೆ ದಿನಗಳನ್ನು ಸ್ಮರಿಸಿ ಸಹಕರಿಸಿದ ಹಿರಿಯ ಅಧಿಕಾರಿಗಳಿಗೆ, ಸಹೋದ್ಯೋಗಿ ಮಿತ್ರರಿಗೆ, ಸಿಬ್ಬಂದಿ ವರ್ಗದವರಿಗೆ ಹಾಗೂ ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.

ವೇದಿಕೆಯಲ್ಲಿ ಸುಳ್ಯ ಠಾಣೆಯ ಸಬ್ ಇನ್ಸ್ ಪೆಕ್ಟರ್ ಎಂ.ಆರ್.ಹರೀಶ್, ಸುಬ್ರಹ್ಮಣ್ಯ ಠಾಣೆಯ ಎ.ಎಸ್.ಐ.ಚಂದಪ್ಪ, ಸುಳ್ಯ ನ್ಯಾಯಾಲಯದ ಎ.ಪಿ.ಪಿ.ಸಂತೋಷ್,ಬೆಳ್ಳಾರೆ ಠಾಣೆಯ ಎ.ಎಸ್.ಐ.ಮಧುಕುಮಾರ್, ಸುಳ್ಯ ವಲಯ ಅರಣ್ಯಾಧಿಕಾರಿ ಎನ್‌.ಮಂಜುನಾಥ್ ಮಾತನಾಡಿದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಮಹಾದೇವ್ ಪ್ರಸಾದ್ ಪ್ರಾಸ್ತಾವಿಕ ಮಾತನಾಡಿದರು. ಎ.ಎಸ್.ಐ.ಭಾಸ್ಕರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಮಹಾದೇವ ಪ್ರಸಾದ್ ವಂದಿಸಿದರು. ಬೆಳ್ಳಾರೆ ಠಾಣೆಯ ಸಿಬ್ಬಂದಿ ವರ್ಗದವರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror