ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಖಾದರ್ ಭೇಟಿ

June 18, 2019
12:00 PM

ಬೆಳ್ಳಾರೆ: ಬೆಳ್ಳಾರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಗರಾಭಿವೃದ್ದಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು  ಭೇಟಿ ನೀಡಿದರು.

ನೆರೆದಿದ್ದ ಸಾರ್ವಜನಿಕರಿಂದ ಆಸ್ಪತ್ರೆಯ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸ್ವೀಕರಿಸಿದರು. ಮುಖಂಡ ಪ್ರೇಮಚಂದ್ರ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಥಿತಿ ಮತ್ತು ಸೌಲಭ್ಯಗಳ ಕೊರತೆಗಳ ಕುರಿತು ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್ ಮನ್ಮಥ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಶೇಖರ ಕಾಮತ್, ಅನಿಲ್ ರೈ ಚಾವಡಿಬಾಗಿಲು, ಹಿರಿಯ ಮುಖಂಡ ಮಾಧವ ಗೌಡ ಕಾಮಧೇನು, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯ ಆರಿಫ್ ಬೆಳ್ಳಾರೆ, ವರ್ತಕರ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಕುಂಟುಪುಣಿಗುತ್ತು, ಕುಕ್ಕೇ ಸುಬ್ರಹ್ಮಣ್ಯ ದೇವಾಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ರಾಜೀವಿ ಆರ್.ರೈ, ಸಚಿನ್‍ರಾಜ್ ಶೆಟ್ಟಿ ಪೆರುವಾಜೆ, ಕುಶಾಲಪ್ಪ ಪೆರುವಾಜೆ, ಅನ್ಸಾರ್ ಹಾಗು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಶ್ವಥಿ ಮರಿಯಾ ಡಿಸೋಜಾ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror