ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

June 3, 2019
11:10 PM

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ ಎಂದು ಮಸೀದಿಯ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ಸ್ಪಷ್ಟೀಕರಣ ನೀಡಿದ್ದಾರೆ.

Advertisement
Advertisement
Advertisement

ಶಾಫಿ ಬೆಳ್ಳಾರೆ ಅವರು ಸುಮಾರು 10 ವರ್ಷಗಳಿಂದ ಭಾಷಣ ಮಾಡುತ್ತಾ ಬಂದಿದ್ದು, ಅವರು ಬೆಳ್ಳಾರೆ ಮಸೀದಿಯ ಒಬ್ಬ ಸದಸ್ಯನಾಗಿದ್ದರೂ,ಅವರಿಗೆ ಭಾಷಣಕ್ಕೆ ಈ ಹಿಂದೆ ಅನುಮತಿ ನೀಡಲಾಗಿತ್ತು. ನಂತರ ಅದು ವಾಟ್ಸಾಪ್ ಗಳಲ್ಲಿ ರಾಜಕೀಯ ಪಕ್ಷದ ಕಾರ್ಯದರ್ಶಿಯ ಭಾಷಣ ಬೆಳ್ಳಾರೆ ಮಸೀದಿ ಯಲ್ಲಿದೆ ಎಂಬ ಪೋಸ್ಟರ್ ಗಳು ಬರಲಾರಂಭಿಸಿದ ನಂತರ ಅವರ ಭಾಷಣಕ್ಕೆ 2 ವರುಷಗಳ ಮೊದಲೆ ವಿರೋಧವಾಗಿತ್ತು. ಆಗ ಆಡಳಿತ ಸಮಿತಿಯು ಇನ್ನು ಮುಂದೆ ಯಾವುದೇ ಕಾರ್ಯಕ್ರಮವಿದ್ದರೂ ಆಡಳಿತ ಸಮಿತಿಯ ಸಭೆಗೆ ಅರ್ಜಿಯನ್ನು ಸಲ್ಲಿಸಬೇಕು. ಅದಲ್ಲದೆ ಆಡಳಿತ ಸಮಿತಿಯ ತೀರ್ಮಾನ ದಂತೆ ಅವರಿಗೆ ಅನುಮತಿ ನೀಡಲಾಗುದೆಂದು ತೀರ್ಮಾನ ಮಾಡಲಾಗಿತ್ತು. ಆದರೆ ಈ ವರುಷ ರಂಝಾನ್ ಪ್ರಭಾಷಣಕ್ಕೆ ಶಾಫಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ಜೂನ್ 1 ರಂದು ಬೆಳಗ್ಗೆ ಭಾಷಣಕ್ಕೆ ಅನುಮತಿ ಇದೆ ಎಂದು ಗೊತ್ತಾಗಿದ್ದು ಅದರಂತೆಯೆ ರಾತ್ರಿ ತರಾವೀಹ್ ನಮಾಝಿನ ನಂತರ ಶಾಫಿ ಪ್ರಭಾಷಣಕ್ಕೆ ಎದ್ದು ನಿಂತಾಗ ಕಾರ್ಯದರ್ಶಿ ನಾನು ಮತ್ತು ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಎಂಬುವವರು  ಅನುಮತಿ ನೀಡದಿರುವ ಬಗ್ಗೆ ವಿಚಾರಿಸಿದಾಗ ಘಟನೆ ನಡೆದಿದ್ದು ಅದಕ್ಕೆ ಆ ರಾಜಕೀಯ ಪಕ್ಷದ ಕಾರಣವಾಗಿರುತ್ತದೆ ಎಂದು ಈ ರಂಝಾನ್ ತಿಂಗಳ ಮೇಲೆ ಸತ್ಯ ಮಾಡಿ ಹೇಳುತ್ತೇನೆ ಹಾಗೂ ಎಲ್ಲಿ ಬೇಕಾದರೂ ಪ್ರಮಾಣಕ್ಕೂ ಸಿದ್ದನಿದ್ದೇನೆ ಎಂದು ಇಬ್ರಾಹಿಂ ಪಿ ಕುಂಞಗುಡ್ಡೆ  ಪತ್ರಿಕಾ  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

#NalinKumarKateel | ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ – ನಳಿನ್‌ ಕುಮಾರ್‌ ಸ್ಪಷ್ಟನೆ | ಸೋಲಿನ ಕಾರಣಗಳನ್ನು ಹಿರಿಯರಿಗೆ ಹೇಳಿದ್ದೇನೆ |
June 24, 2023
1:16 PM
by: ದ ರೂರಲ್ ಮಿರರ್.ಕಾಂ
ಇನ್ನೂ ಬಾರದ ವರುಣ | ಮಳೆಗಾಗಿ ನಾಳೆ KRSನಲ್ಲಿ ವಿಶೇಷ ಹೋಮ | ವರುಣನ ಕೃಪೆಗೆ ಕಾದು ಕುಳಿತ ರೈತ |
June 12, 2023
11:29 AM
by: The Rural Mirror ಸುದ್ದಿಜಾಲ
ವೆದರ್‌ ಮಿರರ್‌ | 07-06-2023 | ವಿವಿದೆಡೆ ತುಂತುರು ಮಳೆ | ಜೂ.13 ಚಂಡಮಾರುತ ಪ್ರಭಾವದ ಬಳಿಕವೇ ಮುಂಗಾರು ಚುರುಕು |
June 7, 2023
11:14 AM
by: ಸಾಯಿಶೇಖರ್ ಕರಿಕಳ
ಇಂದು ನೂತನ ಸಚಿವರ ಪದಗ್ರಹಣ, 24 ಶಾಸಕರಿಗೆ ‘ಮಂತ್ರಿಭಾಗ್ಯ’
May 27, 2023
11:40 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror