ಭೂಕುಸಿತದ ಇಫೆಕ್ಟ್ ಇದು : ಮಳೆ ಬಂದಾಗ ಪಯಸ್ವಿನಿಯಲ್ಲಿ ಕೆಸರು ನೀರಿನ ಆತಂಕ

April 24, 2019
12:12 PM
Advertisement

ಸುಳ್ಯ: ಸಣ್ಣ ಮಳೆ ಬಂದಾಗ ಪಯಸ್ವಿನಿ ನದಿಯಲ್ಲಿ ಕೆಸರು ನೀರು ಹರಿಯುತ್ತಿದೆ. ಇದು ಈಗ ನದಿ ಪಾತ್ರದ ಜನರಿಗೆ ಆತಂಕಕ್ಕೆ ಕಾರಣವಾಗಿದೆ.
ಕಳೆದ ಮಳೆಗಾಲದ ಅವಧಿಯಲ್ಲಿ ಸಂಪಾಜೆ , ಮಡಿಕೇರಿ ಭಾಗದಲ್ಲಿ ಭೂಕುಸಿತದ ಪರಿಣಾಮವಾಗಿ ಸಂಪಾಜೆ, ಊರುಬೈಲು, ಚೆಂಬು, ಸಂಪಾಜೆ ಗ್ರಾಮಗಳಲ್ಲಿ ಪಯಸ್ವಿನಿ ನದಿಯ ಸ್ವರೂಪದಲ್ಲೇ ಬದಲಾವಣೆ ಉಂಟಾಗಿದೆ. ಇದೀಗ ಬೇಸಿಗೆಯಲ್ಲಿ ಸುರಿದ ಮಳೆಯಲ್ಲಿಯೇ ನೀರಿನ ಜೊತೆಯಲ್ಲಿ ಕೆಸರು, ಮರಳು, ಮಣ್ಣು ಹರಿದು ಬರುತಿದೆ. ಇದರಿಂದ ನೀರು ಕೃಷಿಗೆ ನೀರು ಹಾಯಿಸಲು ನದಿಯಲ್ಲಿ ಅಲ್ಲಲ್ಲಿ ಕೃಷಿಕರು ತೋಡಿದ ಹೊಂಡಗಳು ಮುಚ್ಚಿ ಹೋಗುತಿದೆ. ಈ ಹೊಂಡಗಳಲ್ಲಿ ಪಂಪ್ ಇರಿಸಿ ನೀರು ಪಂಪ್ ಮಾಡಿ ಕೃಷಿಗೆ ನೀರು ಹಾಯಿಸುತ್ತಿದ್ದರು. ಆದರೆ ಕೆಸರು ಮಣ್ಣು ಬರುವ ಕಾರಣ ಈ ಹೊಂಡಗಳು ದಿನಂಪ್ರತಿ ಮುಚ್ಚಿ ಹೋಗಿ ಪಂಪ್‍ಗಳು ಕೆಸರಲ್ಲಿ ಮುಳುಗುತ್ತಿದೆ. ಪ್ರತಿ ದಿನ ಹೊಂಡ ತೋಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಹರಿವು ಹೆಚ್ಚಾದರೂ ಕೆಸರು ನೀರು ಬರುವುದು ಸಮಸ್ಯೆ ಸೃಷ್ಠಿಸುತಿದೆ ಎನ್ನುತ್ತಾರೆ ಕೃಷಿಕರು. ಇನ್ನು ನದಿಯಲ್ಲಿ ಒಂದು ಬದಿಯಲ್ಲಿ ಹರಿಯುತ್ತಿದ್ದ ನೀರು ಮರಳು, ಮಣ್ಣು ತುಂಬಿ ದಿನ ಕಳೆದಂತೆ ಹರಿವಿನ ದಿಕ್ಕನ್ನು ಮತ್ತೊಂದೆಡೆ ಬದಲಿಸಿ ನದಿಯ ಸ್ವರೂಪವೇ ಬದಲಾಗುತ್ತಿದೆ. ಕಳೆದ ಮಳೆಗಾಲದಲ್ಲಿ ಎರಡನೇ ಮೊಣ್ಣಂಗೇರಿ, ಜೋಡುಪಾಲದಲ್ಲಿ ಉಂಟಾದ ಪ್ರಳಯ ಮತ್ತು ಭೂಕುಸಿತದಿಂದ ಹರಿದು ಬಂದ ಟನ್ ಗಟ್ಟಲೆ ಕೆಸರು, ಮರಳು, ಮಣ್ಣು ನದಿಯಲ್ಲಿದ್ದ ಬೃಹತ್ ಗಾತ್ರದ ಹೊಂಡಗಳನ್ನು ತುಂಬಿಸಿ ನದಿಯ ಒಡಲನ್ನು ಸಮಾನಾಂತರವಾಗಿಸಿತು. ಇದರಿಂದ ನದಿಯ ಒಡಲಿನ ನೀರಿನ ಶೇಖರಣೆಯೇ ಕಡಿಮೆಯಾಗಿ ಬಸಿಗೆಯಲ್ಲಿ ನೀರಿನ ಕೊರತೆ ಎದುರಾಗಿತ್ತು. ಈ ವರ್ಷವೂ ನದಿಯ ನೀರಿನ ಜೊತೆಗೆ ಮೇಲ್ಭಾಗದಿಂದ ಹರಿದು ಬರುವ ಮಣ್ಣು, ಮರಳು ನದೀಪಾತ್ರವನ್ನು ತುಂಬುವ ಆತಂಕ ಎದುರಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಬೆಂಗಳೂರಿನಿಂದ ಉತ್ತರಕಾಶಿಗೆ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಹೋದ ಸೈನಿಕರ ತಂಡ : ಯಾರು ಈ ಮದ್ರಾಸ್ ಸ್ಯಾಪರ್ಸ್..?
November 28, 2023
12:49 PM
by: The Rural Mirror ಸುದ್ದಿಜಾಲ
ಮುಂದಿನ ವರ್ಷ “ಸೂಪರ್‌ ಎಲ್‌ ನಿನೋ ” ಸಾಧ್ಯತೆ | ಎಚ್ಚರಿಕೆ ನೀಡಿದ ಹವಾಮಾನ ಸಂಸ್ಥೆ | ಮುಂದಿನ ವರ್ಷ ಬರಗಾಲವೋ..? ಜಲ ಪ್ರಳಯವೋ..? |
November 24, 2023
5:02 PM
by: The Rural Mirror ಸುದ್ದಿಜಾಲ
ಅಡಿಕೆ ಮರದ ಸೋಫಾ ಸೆಟ್‌ | ಹಳ್ಳಿ ಸೊಗಡಿನ ಮನೆಗೆ ಅಂದದ ದೇಸಿ ಲುಕ್‌ | ಅಡಿಕೆ ಮೌಲ್ಯವರ್ಧನೆಗೆ ಇನ್ನೊಂದು ದಾರಿ | ಸುಳ್ಯದ ಯುವಕನ ಹೊಸ ಐಡಿಯಾ |
November 18, 2023
10:22 PM
by: ಚಿತ್ರಕಲಾ ಪಟ್ರಮೆ
ಅಡಿಕೆ ಗಿಡ ನರ್ಸರಿಗೆ ಪ್ಲಾಸ್ಟಿಕ್‌ ರಹಿತ ವ್ಯವಸ್ಥೆ | ವೈಜ್ಞಾನಿಕ ಮಾಹಿತಿ ನೀಡಿದ ಸಿಪಿಸಿಆರ್‌ಐ ವಿಜ್ಞಾನಿಗಳು | ತರಕಾರಿ ಗಿಡ ನರ್ಸರಿಗೆ ಪೇಪರ್‌ ತೊಟ್ಟೆ…!- ಇದು ಕೃಷಿಕನ ಪ್ರಯತ್ನ |
November 17, 2023
12:38 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror