ಮಂಗಳೂರು ಬಾಂಬ್ ಪ್ರಕರಣ : ಇದು ಬಾಂಬ್ ಅಲ್ಲ ಪಟಾಕಿ ಎಂದು ಎಚ್ ಡಿ ಕೆ

January 21, 2020
8:28 PM

ಮಂಗಳೂರು:  ಮಂಗಳೂರು ವಿಮಾನ ನಿಲ್ದಾಣದಲ್ಲಿ  ಸೋಮವಾರ ಪತ್ತೆಯಾದ ಬಾಂಬ್ ಬಗ್ಗೆ ನನಗೆ ಇನ್ನೂ ಪೊಲೀಸರ ಮೇಲೆ ಅನುಮಾನವಿದೆ. ಇದರ ಹಿಂದೆ ಏನೋ ಉದ್ದೇಶ ಇದ್ದಂತೆ ಕಾಣುತ್ತದೆ. ಹೀಗಾಗಿ ಘಟನೆಯ ಸಿಸಿಟಿವಿ ವಿಡಿಯೋ ಹಾಗೂ ಸತ್ಯಾಸತ್ಯತೆಯ ಬಗ್ಗೆ ಪೊಲೀಸರು ಜನರ ಮುಂದೆ ಸಮಗ್ರ ಮಾಹಿತಿ ಇಡಬೇಕು ಎಂದು ಶೃಂಗೇರಿಯಲ್ಲಿ ಸೋಮವಾರ  ಹೇಳಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ಮತ್ತೆ ಪ್ರತಿಕ್ರಿಯೆ ನೀಡಿ ಇದು ಪೊಲೀಸರು ಜಾಗೃತಿಗಾಗಿ ಮಾಡಿಸುವ ಅಣಕು ಪ್ರದರ್ಶನ‌ದಂತೆ ಕಾಣುತ್ತದೆ, ಇದು ಬಾಂಬ್ ಅಲ್ಲ ಪಟಾಕಿ ಎಂದು ವ್ಯಂಗ್ಯವಾಡಿದ್ದಾರೆ. ಇಂತಹ ವಿಷಯದಲ್ಲಿ ಸರ್ಕಾರ ಘನತೆ ಮತ್ತು ಗಂಭೀರತೆಯಿಂದ ವರ್ತಿಸಬೇಕು ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ  ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಂಗಳೂರು ಅತ್ಯಂತ ಸೂಕ್ಷ್ಮ ಪ್ರದೇಶ. ಕಳೆದ ಎರಡು ವಾರದ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ  ನಡೆದ ಹಿಂಸಾಚಾರದಲ್ಲೂ ಪೊಲೀಸರ ಪಾತ್ರ ಇತ್ತು ಎಂದು ಹೇಳಲಾಗಿದೆ. ಹೀಗಾಗಿ ಈಗ ಪತ್ತೆಯಾದ ಬಾಂಬ್ ಹಿಂದೆಯೂ ಅಂತಹದ್ದೇ ಕೈವಾಡ ಏಕಿರಬಾರದು ಎಂದು ಪ್ರಶ್ನಿಸಿದ್ದಾರೆ. ಈ ಸಂದೇಹ ದೂರವಾಗಲು ಪೊಲೀಸರು ಸತ್ಯಾಸತ್ಯತೆಯನ್ನು  ತೆರೆದಿಡಬೇಕು ಎಂದು ಹೇಳಿದರು. ಇಲ್ಲಿ ಆರ್‌ಎಸ್‌ಎಸ್  ಅಣತಿಯಂತೆ  ಸರಕಾರ ನಡೆಸಬಾರದು. ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದು ಸರಿಯಲ್ಲ ಎಂದು  ಟೀಕಿಸಿದರು. ಘಟನೆಯ ಬಗ್ಗೆ ಮಂಗಳೂರು ಕಮೀಶನರ್ ಜೊತೆ ಮಾತನಾಡಿದ್ದೇನೆ, ಅವರ ಮಾಹಿತಿಯನ್ನು  ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror